ಫೆ.9 ರಂದು ಶರವೂರು ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಭಕ್ತಾಧಿಗಳ ಸಭೆ

0

ಆಲಂಕಾರು: ಸೀಮಾ ದೇವಸ್ಥಾನವಾದ ಶರವೂರು ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಹಾಗೂ ಪುನರ್ ನಿರ್ಮಾಣ ಕಾರ್ಯಗಳ ಅಂಗವಾಗಿ ದೈವಜ್ಞರಾದ ವಳಕ್ಕುಂಜ ವೆಂಕಟ್ರಮಣ ಭಟ್‌ರವರ ಚಿಂತನೆಯಲ್ಲಿ ಕಂಡುಬಂದಂತೆ ಪರಿಹಾರ ಹಾಗೂ ಪ್ರಾಯಶ್ಚಿತ ಕಾರ್ಯಗಳು ನಡೆಯುತ್ತಿದ್ದು. ಇನ್ನೂ ಕೂಡ ಪ್ರಾಯಶ್ಚಿತ ಕಾರ್ಯಗಳು ನಡೆಯಬೇಕಿದೆ ಹಾಗು
ಜೀರ್ಣೋದ್ಧಾರ ಕೆಲಸಗಳು ಸುಸೂತ್ರವಾಗಿ ನಡೆಸಿಕೊಂಡು ಹೋಗಲು ಸರಕಾರದ ಮಾರ್ಗಸೂಚಿಯಂತೆ ಜೀರ್ಣೋದ್ಧಾರ ಸಮಿತಿಯನ್ನು ರಚಿಸಬೇಕಾಗಿದ್ದು ಫೆ.9 ಗುರುವಾರ ಬೆಳಗ್ಗೆ 10 ಗಂಟೆಗೆ ಸೀಮೆಯ ಭಕ್ತಾದಿಗಳ ಸಭೆಯನ್ನು ಕ್ಷೇತ್ರದ ಸಭಾಂಗಣದಲ್ಲಿ ಕರೆಯಲಾಗಿದೆ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷರು,ಸದಸ್ಯರು ಹಾಗು ಅರ್ಚಕರು, ಸಿಬ್ಬಂದಿ ವರ್ಗದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here