ಪುತ್ತೂರಿಗೆ ಕೇಂದ್ರ ಸಹಕಾರ ಸಚಿವ ಅಮಿತ್ ಷಾ‌ ಭೇಟಿ ಹಿನ್ನೆಲೆ ಮುಂಡೂರಿನಲ್ಲಿ ಪೂರ್ವಭಾವಿ ಸಭೆ

0

ಪುತ್ತೂರು: ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಫೆ.11ರಂದು ಭೇಟಿ ನೀಡಲಿದ್ದು ಕಾರ್ಯಕ್ರಮವನ್ನು ಯಶಸ್ವಿ ಗೊಳಿಸುವ ನಿಟ್ಟಿನಲ್ಲಿ ಮುಂಡೂರು ಬಿಜೆಪಿ ಗ್ರಾಮ ಸಮಿತಿಯಿಂದ ಪೂರ್ವಭಾವಿ ಸಭೆ ನಡೆಸಿದರು.
ಫೆ.11 ರ ಕಾರ್ಯಕ್ರಮ ದಲ್ಲಿ ಕಾರ್ಯಕರ್ತರು ಭಾಗವಹಿಸುವ ನಿಟ್ಟಿನಲ್ಲಿ ಚರ್ಚಿಸಲಾಗಿದ್ದು ಗ್ರಾಮದಲ್ಲಿ ಮನೆ ಮನೆ ಭೇಟಿ ಮಾಡಿ ಜನರನ್ನು ಸಂಪರ್ಕಿಸಲಾಗುವುದು. ಹಾಗೂ ಕಾರ್ಯಕ್ರಮದಲ್ಲಿ ಮುಂಡೂರು ಗ್ರಾಮದಿಂದ ಸುಮಾರು 1000 ಮಂದಿ ಕಾರ್ಯಕರ್ತರು ಭಾಗವಹಿಸುವಂತೆ ಜನ‌ ಸೇರಿಸುವುದಾಗಿ ತೀರ್ಮಾನಿಸಲಾಯಿತು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ನರಿಮೊಗರು ಶಕ್ತಿ ಕೇಂದ್ರ ಪ್ರಮುಖರಾದ ಜಯರಾಮ ಪೂಜಾರಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.
ಮುಂಡೂರು ಗ್ರಾ.ಪಂ ಅಧ್ಯಕ್ಷೆ ಪುಷ್ಪಾ ಪುರಂದರ ಗೌಡ, ಪಕ್ಷದ ಪ್ರಮುಖರಾದ ಅರುಣ್ ಕುಮಾರ್ ಪುತ್ತಿಲ, ಸದಾಶಿವ ಶೆಟ್ಟಿ ಪಟ್ಟೆ, ‌ಅನಿಲ್ ಕುಮಾರ್ ಕಣ್ಣಾರ್ನೂಜಿ, ಪ್ರೇಮ, ಶ್ರೀಕಾಂತ್ ಆಚಾರ್, ಬಾಲಕೃಷ್ಣ ಪೂಜಾರಿ ಸೇರಿದಂತೆ ಹಲವು ಮಂದಿ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here