ರಾಷ್ಟ್ರಮಟ್ಟದ ಮುಕ್ತ ಕರಾಟೆ ಸ್ಪರ್ಧೆ; ನೆಲ್ಯಾಡಿ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

0

ನೆಲ್ಯಾಡಿ: ಮೈಸೂರು ಬನ್ನಿಮಂಟಪ ಸೈಂಟ್ ಫಿಲೋಮಿನಾ ಕಾಲೇಜ್ ನ ಒಳಾಂಗಣ ಕ್ರೀಡಾಂಗಣದಲ್ಲಿ ಫೆ.5ರಂದು ನಡೆದ ರಾಷ್ಟ್ರಮಟ್ಟದ ಮುಕ್ತ ಕರಾಟೆ ಸ್ಪರ್ಧೆಯಲ್ಲಿ ನೆಲ್ಯಾಡಿಯ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ ಲಭಿಸಿದೆ.

ಶಾಲೆಯ ವಿದ್ಯಾರ್ಥಿ ಮೋಕ್ಷಿತ್ ಕಟ ವಿಭಾಗದಲ್ಲಿ ಪ್ರಥಮ ಹಾಗೂ ಕುಮಿಟೆಯಲ್ಲಿ ದ್ವಿತೀಯ, ಚಿರಾಯು ಸಿ. ಕಟದಲ್ಲಿ ದ್ವಿತೀಯ, ಕುಮಿಟೆಯಲ್ಲಿ ತೃತೀಯ, ಕೀರ್ತೇಶ್ ಕುಮಟೆಯಲ್ಲಿ ಪ್ರಥಮ, ಕಟದಲ್ಲಿ ತೃತೀಯ ಹಾಗೂ ಪ್ರತೀಕ್ಷ್ ಅವರು ಕುಮಿಟೆ ಮತ್ತು ಕಟದಲ್ಲಿ ದ್ವಿತೀಯ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇವರಿಗೆ ಕರಾಟೆ ಶಿಕ್ಷಕ ಚಂದ್ರಶೇಖರ್ ಕನಕಮಜಲುರವರು ಕರಾಟೆ ತರಬೇತಿ ನೀಡಿದ್ದರು.

LEAVE A REPLY

Please enter your comment!
Please enter your name here