ಪಡುಬೆಟ್ಟು ವಿಷ್ಣುಮೂರ್ತಿ ದೇವಸ್ಥಾನದ ರಂಗಪೂಜೆ, ದೈವಗಳ ನೇಮೋತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ನೆಲ್ಯಾಡಿ: ಮಾ.9ರಂದು ನಡೆಯಲಿರುವ ನೆಲ್ಯಾಡಿ ಗ್ರಾಮದ ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ರಂಗಪೂಜೆ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ದೇವಸ್ಥಾನದ ಪ್ರಧಾನ ಅರ್ಚಕ ಆದಿತ್ಯ ಆಚಾರ್ ಅವರು ವಿಧಿವಿಧಾನ ನೆರವೇರಿಸಿದರು. ಆಡಳಿತ ಮೊಕ್ತೇಸರರಾದ ಸುಬ್ರಹ್ಮಣ್ಯ ಶಬರಾಯ, ಅಧ್ಯಕ್ಷರಾದ ಸತೀಶ್ ಕೆ.ಎಸ್.ದುರ್ಗಾಶ್ರೀ, ಕಾರ್ಯದರ್ಶಿ ಕಾಂತಪ್ಪ ಗೌಡ ಪೂವಾಜೆ, ಕೋಶಾಧಿಕಾರಿ ವೆಂಕಟರಮಣ ಆರ್.ಕೊಲ್ಯೊಟ್ಟು, ಪಡುಬೆಟ್ಟು ಮಹಾವಿಷ್ಣು ಗೆಳೆಯರ ಬಳಗದ ಅಧ್ಯಕ್ಷ ಶಿವಪ್ರಸಾದ್ ಬೀದಿಮಜಲು, ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಅಧ್ಯಕ್ಷ ಸುಂದರ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here