ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬರುವ ಹಿನ್ನೆಲೆ
ನಗರಸಭೆಯಿಂದ ರಸ್ತೆ ಬದಿಯ ಗಿಡಗಂಟಿಗಳ ತೆರವು

0

ಪುತ್ತೂರು: : ಸುವರ್ಣ ಮಹೋತ್ಸವ ಆಚರಿಸುತ್ತಿರುವ ಪ್ರತಿಷ್ಠಿತ ಅಂತರ್ರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಫೆ.11ರಂದು ಕೇಂದ್ರ ಗೃಹ ಸಚಿವರು, ಕೇಂದ್ರದ ಪ್ರಥಮ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಅವರು ಫೆ.11ರಂದು ಪುತ್ತೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಫೆ. 8ರಂದು ಬೆಳಗ್ಗೆ ನಗರಸಭೆ ವತಿಯಿಂದ ಪೇಟೆಯಲ್ಲಿ ರಸ್ತೆಯ ಬದಿಯಲ್ಲಿ ಬೆಳೆದಿರುವ ಗಿಡಗಂಟಿಗಳ ತೆರವು ಕಾರ್ಯಾಚರಣೆ ನಡೆಯಿತು.
ಅಮಿತ್ ಶಾ ಅವರು ಬರುವ ದಾರಿಯಾಗಿರುವ ದರ್ಬೆ ಪರಿಸರವನ್ನು ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರ ಉಪಸ್ಥಿತಿಯಲ್ಲೇ ಪೌರ ಕಾರ್ಮಿಕರು ಗಿಡಗಂಟಿಗಳನ್ನು ತೆರವು ಮಾಡಿ ಸ್ವಚ್ಛಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ನಗರಸಭೆ ಆರೋಗ್ಯ ನಿರೀಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here