ಫೆ.11: ಕ್ಯಾಂಪ್ಕೋ ಸುವರ್ಣ ಮಹೋತ್ಸವಕ್ಕೆ ಕೆಎಸ್‌ಆರ್‌ಟಿಸಿ ಬಸ್‌ಗಳ ನಿಯೋಜನೆ:ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಕಡಬ, ಮಡಿಕೇರಿ ಬಸ್ ಸಂಚಾರ ವ್ಯತ್ಯಯ

0

ಪುತ್ತೂರು: ಪುತ್ತೂರಿನಲ್ಲಿ ಫೆ.11ರಂದು ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಸಂಭ್ರಮಾಚರಣೆಯ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಹಾಗೂ ಸಚಿವರುಗಳು ಭಾಗವಹಿಸುವವರಿದ್ದು ಸದರಿ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಸುಗಳನ್ನು ನಿಯೋಜನೆ ಮಾಡಲು ಕಾರ್ಯಾಕ್ರಮದ ಸಂಯೋಜಕರಿಂದ ಬೇಡಿಕೆ ಬಂದಿದೆ. ಅದರಂತೆ ಪುತ್ತೂರು ವಿಭಾಗದಿಂದ ಸದರಿ ಕಾರ್ಯಕ್ರಮದ ಪ್ರಯುಕ್ತ ಗರಿಷ್ಠ ಸಂಖ್ಯೆಯಲ್ಲಿ ಬಸ್ಸುಗಳನ್ನು ನಿಯೋಜನೆ ಮಾಡಲಾಗುತ್ತಿದೆ. ಆದುದರಿಂದ ಸದರಿ ದಿನದಂದು ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಕಡಬ ಹಾಗೂ ಮಡಿಕೇರಿ ತಾಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯಾಗುತ್ತಿರುವ ನಿಗಮದ ಸಾರಿಗೆಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧತೆಯಿರುತ್ತದೆ. ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಕರಾರಸಾ ನಿಗಮದೊಂದಿಗೆ ಸಹಕರಿಸಬೇಕಾಗಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here