ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶೀಘ್ರಗೊಳಿಸಲು ಸಚಿವರಿಗೆ ಮನವಿ

0

ಪುತ್ತೂರು: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿದ್ದು, ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಿ ಪ್ರಕ್ರಿಯೆ ಆದಷ್ಟು ಬೇಗನೆ ಪೂರ್ಣಗೊಳಿಸಲು ಸರಕಾರದ ಮೇಲೆ ಒತ್ತಡ ಹಾಕಬೇಕೆಂದು ಆಗ್ರಹಿಸಿ ಪದವೀಧರ ಪ್ರಾಥಮಿಕ ಶಿಕ್ಷಕ ಪರೀಕ್ಷಾರ್ಥಿಗಳು ಫೆ. 8ರಂದು ಸಚಿವ ಎಸ್. ಎಸ್ ಅಂಗಾರರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಶಾಸಕರು ಮುಂದಿನ ಅಧಿವೇಶನದಲ್ಲಿ ಈ ಕುರಿತು ಪ್ರಸ್ತಾಪಿಸಿ ಸರಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಜಯಲಲಿತಾ ಪುತ್ತೂರು, ಕ್ಷಮಾ ಪಂಜ, ರೇಖಾ ಸುಳ್ಯ, ಆಶಾಲತಾ ಪುತ್ತೂರು, ಜೀವಿತ ಗುತ್ತಿಗಾರು, ಅಶ್ವಿನಿ ಮುಂಡೋಡಿ, ಪೂರ್ಣಿಮಾ ಪುತ್ತೂರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here