ಕೇಂದ್ರ ಸಚಿವ ಅಮಿತ್ ಶಾ ಪುತ್ತೂರಿಗೆ ಭೇಟಿ‌ ಹಿನ್ನೆಲೆ ಬಿಜೆಪಿಯಿಂದ ಪುತ್ತೂರು ನಗರದಲ್ಲಿ ಪ್ರಚಾರ ಜಾಥಾ

0

ಪುತ್ತೂರು:ಪ್ರತಿಷ್ಠಿತ ಅಂತರ್ರಾಜ್ಯ ಸಹಕಾರಿ ಸಂಸ್ಥೆಯಾಗಿರುವ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಫೆ.11ರಂದು ಕೇಂದ್ರ ಗೃಹ ಸಚಿವ, ರಾಷ್ಟ್ರದ ಪ್ರಥಮ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಅವರು ಪುತ್ತೂರುಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಫೆ.೯ರಂದು ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಪುತ್ತೂರು ನಗರದಲ್ಲಿ ಬಿಜೆಪಿಯವರು ಪ್ರಚಾರ ಜಾಥಾ ನಡೆಸಿದರು.


ದರ್ಬೆಯಿಂದ ಹೊರಟ ಜಾಥಾಕ್ಕೆ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ತೆಂಗಿನಕಾಯಿ ಒಡೆದು ಚಾಲನೆ ನೀಡಿದರು.ಬಳಿಕ ಜಾಥಾವು ಮುಖ್ಯ ರಸ್ತೆಯ ಮೂಲಕ ಸಾಗಿ ಬೊಳುವಾರು ಆಂಜನೇಯ ಮಂತ್ರಾಲಯದ ತನಕ ಸಾಗಿತು.ಜಾಥಾದ ಸಮಾರೋಪದಲ್ಲಿ ಮಾತನಾಡಿದ ಶಾಸಕ ಸಂಜೀವ ಮಠಂದೂರು, ಕೇಂದ್ರ ಸಹಕಾರಿ ಸಚಿವರ ಕಾರ್ಯಕ್ರಮದಲ್ಲಿ ನಗರದ ಎಲ್ಲಾ ವರ್ತಕರು, ವಾಹನ ಚಾಲಕರು ಭಾಗವಹಿಸುವಂತೆ ದರ್ಬೆಯಿಂದ ಬೊಳುವಾರು ತನಕ ಜಾಥಾ ನಡೆಸಿ ಮನವಿ ಮಾಡಲಾಗಿದೆ ಎಂದು ಹೇಳಿ, ಜಾಥಾದಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದರು.


ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಶಾಂತಿವನ, ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಜಿಲ್ಲಾ ರೈತ ಮೋರ್ಛಾದ ಅಧ್ಯಕ್ಷ ರಾಜೀವ ಭಂಡಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಮಾಜಿ ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ, ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಪೂಡಾದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ನಗರ ಸಭಾ ಸದಸ್ಯರಾದ ಮೋಹಿನಿ ವಿಶ್ವನಾಥ, ಮನೋಹರ್, ಸುಂದರ ಪೂಜಾರಿ ಬಡಾವು, ಶಶಿಕಲಾ ಸಿ.ಎಸ್., ಗೌರಿ ಬನ್ನೂರು, ಇಂದಿರಾ ಪುರುಷೋತ್ತಮ ಆಚಾರ್ಯ, ಯಶೋದ ಬಿರಾವು, ದೀಕ್ಷಾ ಪೈ, ಕಬಕ ಗ್ರಾ.ಪಂ ಅಧ್ಯಕ್ಷ ವಿನಯ ಕುಮಾರ್ ಕಲ್ಲೇಗ, ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ ಸಹಜ್ ಜೆ ರೈ ಬಳೆಜ್ಜ, ಪಕ್ಷದ ಪ್ರಮುಖರಾದ ಕಿಶೋರ್ ಕುಮಾರ್ ಬೊಟ್ಯಾಡಿ,ಗೋಪಾಲಕೃಷ್ಣ ಹೇರಳೆ, ಅಪ್ಪಯ್ಯ ಮಣಿಯಾಣಿ, ಅರುಣ್ ವಿಟ್ಲ, ದಯಾನಂದ ಉಜಿರೆಮಾರ್, ಚಂದ್ರಶೇಖರ ರಾವ್ ಬಪ್ಪಳಿಗೆ, ಹರಿಪ್ರಸಾದ್ ಯಾದವ್, ಅನಿಲ್ ತೆಂಕಿಲ, ಜಯಶ್ರೀ ಶೆಟ್ಟಿ, ನಾಗೇಶ್ ಟಿ.ಎಸ್., ರಾಜೇಶ್ ರೈ ಪರ್ಪುಂಜ, ಲೋಕೇಶ್ ಹೆಗ್ಡೆ ಸೇರಿದಂತೆ ನೂರಾರು ಮಂದಿ ಕಾರ್ಯಕರ್ತರು ಜಾಥಾದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here