ವಿಟ್ಲ ಪೊಲೀಸರಿಂದ ಬಂಧನಕ್ಕೊಳಪಟ್ಟ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ

0

ವಿಟ್ಲ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪಯ್ಯನ್ನೂರು ಪಾಣಚೇರಿ ಕುಂಞಮಂಗಳ ತಂಬಾಹಿ ಕೆಳಕೆ ವೀಟಿಲೆ ಕಣ್ಣನ್ ಎಂಬವರ ಪುತ್ರಿ ಸುಜಾತ(42 ವ.)ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

2013ರಲ್ಲಿ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಜಾತರವರು ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವರ ಪತ್ತೆಗಾಗಿ ನ್ಯಾಯಾಲಯವು ವಾರಂಟ್ ಜಾರಿಮಾಡಿತ್ತು. ವಿದೇಶದಲ್ಲಿದ್ದ ಆರೋಪಿ ಊರಿಗೆ ವಾಪಸ್ಸಾಗುತ್ತಿದ್ದ ವೇಳೆ ಕೇರಳ ರಾಜ್ಯದ ಕೋಝಿಕೊಡ್ ಅಂತರಾಷ್ಟೀಯ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಅಧಿಕಾರಿಗಳು ಬಂಧಿಸಿ ವಿಟ್ಲ ಠಾಣಾ ಪೊಲೀಸರಿಗೆ ಹಸ್ತಾಂತರ ಮಾಡಿದ್ದರು.

LEAVE A REPLY

Please enter your comment!
Please enter your name here