ಹನುಮಗಿರಿಯಲ್ಲಿ ಅಮರಗಿರಿ ಲೋಕಾರ್ಪಣೆಗೆ ಕ್ಷಣಗಣನೆ ಆರಂಭ

0

ಹನುಮಗಿರಿ: ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ರೂಪುಗೊಂಡಿರುವ ಅಮರಗಿರಿಯ ಭಾರತೀ ಅಮರಜ್ಯೋತಿ ಮಂದಿರದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಇಂದು ಮಧ್ಯಾಹ್ನ ಕೇಂದ್ರ ಗೃಹಸಚಿವರು, ಸಹಕಾರಿ ಸಚಿವರಾಗಿರುವ ಅಮಿತ್ ಶಾ ಅವರು ವಿದ್ಯುಕ್ತವಾಗಿ ಅಮರಗಿರಿ ಯನ್ನು ಲೋಕಾರ್ಪಣೆಗೊಳಿಸಲಿದ್ದು, ಅಂತಿಮ ಹಂತದ ಸಿದ್ಧತೆಗಳೆಲ್ಲವೂ ಪೂರ್ಣಗೊ‌ಂಡಿದೆ. ಸ್ಥಳದಲ್ಲಿ ಭದ್ರತಾ ಪಡೆಗಳ ಸಿಬ್ಬಂದಿ ಈಗಾಗಲೇ ಹಲವು ಸುತ್ತಿನ ಪರಿಶೀಲನೆ ನಡೆಸಿ ಭದ್ರತೆಯ ಬಗ್ಗೆ ಖಚಿತಪಡಿಸಿಕೊಂಡಿದ್ದಾರೆ. ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಪಾಸ್ ಇದ್ದವರಿಗೆ ಮಾತ್ರ ಕಾರ್ಯಕ್ರಮದ ಆವರಣದೊಳಗೆ ಪ್ರವೇಶ ನೀಡಲಾಗುತ್ತಿದೆ. ಎಲ್ಲೆಡೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

 ಅಮಿತ್ ಶಾ ಕಾರ್ಯಕ್ರಮ....

ಫೆ.11ರಂದು ಅಪರಾಹ್ನ 2.50ಕ್ಕೆ ಕಣ್ಣೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಅಮಿತ್ ಶಾ ಅವರು 3.15ಕ್ಕೆ ಹನುಮಗಿರಿ ಹೆಲಿಪ್ಯಾಡ್‌ನಲ್ಲಿ ಇಳಿಯಲಿದ್ದಾರೆ. ಹನುಮಗಿರಿ, ಅಮರಗಿರಿ ಭೇಟಿ ಮುಗಿಸಿ 3.40ಕ್ಕೆ ಪುತ್ತೂರಿಗೆ ಹೊರಡಲಿದ್ದಾರೆ.ಸಾಯಂಕಾಲ 5.30ರವರೆಗೆ ಪುತ್ತೂರು ತೆಂಕಿಲ ಮೈದಾನದಲ್ಲಿ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.5.40ಕ್ಕೆ ಪುತ್ತೂರಿನಿಂದ ಹೊರಟು, 6 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯಲಿದ್ದಾರೆ.6.15ರಿಂದ 8 ಗಂಟೆಯವರೆಗೆ ಮಂಗಳೂರಿನಲ್ಲಿ ಇರಲಿದ್ದಾರೆ.

LEAVE A REPLY

Please enter your comment!
Please enter your name here