ಅಪಘಾತ: ಗಾಯಾಳು ಬಾಲಕ ಸಾವು

0

ಉಪ್ಪಿನಂಗಡಿ: ಕಲ್ಲೇರಿಯ ಶಿವಗಿರಿ ಎಂಬಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಅಬೂಬಕ್ಕರ್ ಸಿದ್ದೀಕ್ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ತಡರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕುಪ್ಪೆಟ್ಟಿ ನಿವಾಸಿ ಕೂಲಿ ಕಾರ್ಮಿಕ ಇಬ್ರಾಹೀಂ ಯಾನೆ ಅಬ್ಬೋನು ಎಂಬವರ ಪುತ್ರ ಅಬೂಬಕ್ಕರ್ ಸಿದ್ದೀಕ್ (16) ಮೃತ ಬಾಲಕ. ಫೆ.1ರಂದು ಈತ ತನ್ನ ಸ್ನೇಹಿತ ಮುಹಮ್ಮದ್ ಕಲೀಲ್ ಎಂಬಾತನೊಂದಿಗೆ ದ್ವಿಚಕ್ರ ವಾಹನದಲ್ಲಿ ಕರಾಯ ಕಡೆಯಿಂದ ಕುಪ್ಪೆಟ್ಟಿ ಕಡೆಗೆ ಹೋಗುತ್ತಿದ್ದ ಸಂದರ್ಭ ಶಿವಗಿರಿ ಬಳಿ ಗೂಡ್ಸ್ ರಿಕ್ಷಾದ ಹಿಂಬದಿಗೆ ಇವರ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿತ್ತು. ಈ ಸಂದರ್ಭ ರಸ್ತೆಗೆಸೆಯಲ್ಪಟ್ಟ ದ್ವಿಚಕ್ರ ವಾಹನ ಸವಾರರಿಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರಲ್ಲಿ ಅಬೂಬಕ್ಕರ್ ಸಿದ್ದೀಕ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿರುವ ಮುಹಮ್ಮದ್ ಕಲೀಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ. ಮೃತ ಅಬೂಬಕ್ಕರ್ ಸಿದ್ಧೀಕ್‌ರವರು ತಂದೆ, ತಾಯಿ ಹಾಗೂ ಓರ್ವ ಸಹೋದರಿ ಹಾಗೂ ಆರು ಮಂದಿ ಸಹೋದರರನ್ನು ಅಗಲಿದ್ದಾನೆ.

LEAVE A REPLY

Please enter your comment!
Please enter your name here