ಹನುಮಗಿರಿಯಲ್ಲಿ ಅಮರಗಿರಿ ಲೋಕಾರ್ಪಣೆ

0

ಪುತ್ತೂರು: ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಮರಗಿರಿ ಭಾರತ್‌ ಸೇವಾ ಮಂದಿರವನ್ನು ಕೇಂದ್ರ ಗೃಹಸಚಿವ ಅಮಿತ್‌ ಶಾರವರು ಲೋಕಾರ್ಪಣೆಗೊಳಿಸಿದರು. ಕೇರಳದ ಕಣ್ಣೂರಿನಿಂದ ಹೆಲಿಕಾಫ್ಟರ್‌ನಲ್ಲಿ ಬಂದು ಹನುಮಗಿರಿ ಗಜಾನನ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿನ ಹೆಲಿಪ್ಯಾಡ್‌ನಲ್ಲಿ ಬಂದಿಳಿದ ಅಮಿತ್‌ ಶಾ ಅವರಿಗೆ ಅಭೂತಪೂರ್ವ ಗೌರವ ನೀಡಲಾಯಿತು. ಬಳಿಕ ಹನುಮಗಿರಿ ಕ್ಷೇತ್ರದ ಪಂಚಮುಖಿ ಆಂಜನೇಯ ದೇವರ ದರುಶನ ಪಡೆದ ಅಮಿತ್‌ ಶಾರವರು ಅಮರಗಿರಿಯನ್ನು ಲೋಕಾರ್ಪಣೆ ಗೊಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ, ದ.ಕ ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷರೂ ಆಗಿರುವ ನಳಿನ್‌ ಕುಮಾರ್‌ ಕಟೀಲ್‌ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಶ್ರೀ ಕ್ಷೇತ್ರದ ವತಿಯಿಂದ ಅಮಿತ್‌ ಶಾ ಅವರಿಗೆ ಗೌರವಾರ್ಪಣೆ ನಡೆಯಿತು. ಶ್ರೀ ಕ್ಷೇತ್ರದ ಆಡಳಿತ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯ, ಕೇಂದ್ರ ಸರಕಾರದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಕೆ.ಎಮ್‌ ನಟರಾಜ್‌ ಮತ್ತಿತರರು ಅಮಿತ್‌ ಶಾ ಮತ್ತಿತರ ಗಣ್ಯರನ್ನು ಸ್ವಾಗತಿಸಿದರು. ಖ್ಯಾತ ವಕೀಲ ಅಮಿತ್‌ ಶಾ ಮಹೇಶ್‌ ಕಜೆ ಅವರು ಅದ್ಭುತ ರೀತಿಯಲ್ಲಿ ಕಾರ್ಯಕ್ರಮ ನಿರೂಪಣೆ ಮಾಡಿದರು.

LEAVE A REPLY

Please enter your comment!
Please enter your name here