ಫೆ.12- ಪುಣ್ಚತ್ತಾರು ಬೀರ್ನೇಲಿನಲ್ಲಿ ಕೆಸರ್‌ಡ್ ಒಂಜಿ ದಿನ ಕ್ರೀಡಾಕೂಟ

0

ಕಾಣಿಯೂರು: ಪುಣ್ಚತ್ತಾರು ಬೀರ್ನೇಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ ಸಮಿತಿ ಬೀರ್ನೇಲು ಪುಣ್ಚತ್ತಾರು ಇದರ ವತಿಯಿಂದ ಕೆಸರ್‌ಡ್ ಒಂಜಿ ದಿನ ಕ್ರೀಡಾಕೂಟ ಮತ್ತು ಸಭಾ ಕಾರ್ಯಕ್ರಮವು ಕ್ಷೇತ್ರದ ದೇವರಗದ್ದೆಯಲ್ಲಿ ಫೆ.12ರಂದು ನಡೆಯಲಿದೆ. ಬೆಳಿಗ್ಗೆ ಬೀರ್ನೇಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಚಿದಾನಂದ ಉಪಾಧ್ಯಾಯರವರು ಕಾರ್ಯಕ್ರಮವನ್ನು ಉದ್ಗಾಟಿಸಲಿದ್ದು, ಹಲವಾರು ಮಂದಿ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ನಡೆಯುವ ಧಾರ್ಮಿಕ ಸಭೆಯಲ್ಲಿ ಮಾಣಿಲ ಶ್ರೀಧಾಮ ಕ್ಷೇತ್ರದ ಶ್ರೀ ಪರಮಹಂಸ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಠಂದೂರು ಸೇರಿದಂತೆ ಹಲವಾರು ಮಂದಿ ಗಣ್ಯರು ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪುರುಷರ ಮುಕ್ತ ಕೆಸರುಗದ್ದೆ ಹಗ್ಗಜಗ್ಗಾಟ, ಪುರುಷರ ಮುಕ್ತ ಕೆಸರುಗದ್ದೆ ವಾಲಿಬಾಲ್ ಪಂದ್ಯಾಟ, ಮಹಿಳೆಯರ ಕೆಸರುಗದ್ದೆ ಹಗ್ಗಜಗ್ಗಾಟ, ಮಹಿಳೆಯರ ಆಹ್ವಾನಿತ ತ್ರೋಬಾಲ್ ಪಂದ್ಯಾಟ ಹಾಗೂ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ಇನ್ನಿತರ ಆಟೋಟ ಸ್ಪರ್ಧೆಗಳು ನಡೆಯಲಿದೆ ಎಂದು ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here