ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್‌ರವರು ಆಂದ್ರಪ್ರದೇಶದ ರಾಜ್ಯಪಾಲರಾಗಿ ಆಯ್ಕೆ: 2019ರಲ್ಲಿ ಹನುಮಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದ ನ್ಯಾಯಮೂರ್ತಿ

0

ಪುತ್ತೂರು: ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್‌ರವರು ಆಂದ್ರಪ್ರದೇಶದ ರಾಜ್ಯಪಾಲರಾಗಿ ಆಯ್ಕೆಯಾಗಿದ್ದಾರೆ. ಮೂಡಬಿದ್ರೆಯ ಬೆಳುವಾಯಿ ನಿವಾಸಿಯಾದ ಎಸ್. ಅಬ್ದುಲ್ ನಝೀರ್‌ರವರು ಮೂಡಬಿದ್ರೆ ಮಹಾವೀರ ಕಾಲೇಜಿನಲ್ಲಿ ಪದವಿ ಹಾಗೂ ಮಂಗಳೂರು ಎಸ್‌ಡಿಎಂ ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು.

2019ರ ಜೂ.11ರಂದು ಹನುಮಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದ ನಝೀರ್‌ರವರು ಹನುಮಗಿರಿ ಶ್ರೀಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಅಂದು ಗಜಾನನ ವಿದ್ಯಾಸಂಸ್ಥೆಯ ಮಕ್ಕಳೊಂದಿಗೆ `ಸಂವಿಧಾನದ ಆಶಯಗಳು’ ಎನ್ನುವ ವಿಚಾರದ ಸಂವಾದ ಕಾರ್ಯಕ್ರಮದಲ್ಲಿ ಕೂಡ ಭಾಗಹಿಸಿದ್ದರು. ಕೇತ್ರದಲ್ಲಿರುವ ರಾಮಾಯಣ ಮಾನಸೋಧ್ಯಾನ, ಹನುಮಾನ್ ಮಾನಸೋಧ್ಯಾನಗಳನ್ನು ಆಸಕ್ತಿಯಿಂದ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಹನುಮಗಿರಿಗೆ ಭೇಟಿ ನೀಡಿದ್ದ ಸಂದರ್ಭ

೧.
೨.

LEAVE A REPLY

Please enter your comment!
Please enter your name here