ಮುಕ್ರಂಪಾಡಿಯಲ್ಲಿ 51ನೇ ವರ್ಷದ ಸಾರ್ವಜನಿಕ ಶ್ರೀಸತ್ಯನಾರಾಯಣ ಪೂಜೆ

0

ಪುತ್ತೂರು ಮುಕ್ರಂಪಾಡಿ ಶ್ರೀಸತ್ಯನಾರಾಯಣ ಪೂಜಾ ಸಮಿತಿ ವತಿಯಿಂದ ಫೆ.೧೧ರಂದು ಮುಕ್ರಂಪಾಡಿಯ ಸುಭದ್ರ ಕಲ್ಯಾಣ ಮಂಟಪದ ಎದುರುಗಡೆಯಲ್ಲಿ ವೇದಮೂರ್ತಿ ಉದಯನಾರಾಯಣ ಕಲ್ಲುರಾಯರ ನೇತೃತ್ವದಲ್ಲಿ ೫೧ನೇ ವರ್ಷದ ಸಾರ್ವಜನಿಕ ಶ್ರೀಸತ್ಯನಾರಾಯಣ ಪೂಜೆ ನಡೆಯಿತು. ಬೆಳಿಗ್ಗೆ ೭ರಿಂದ ಗಣಪತಿ ಹವನ, ಅಶ್ವತ ನಾರಾಯಣ ಪೂಜೆ, ಸಂಜೆ ಸಾರ್ವಜನಿಕ ಶ್ರೀಸತ್ಯನಾರಾಯಣ ಪೂಜೆ ಮಹಾಪೂಜೆ ಪ್ರಸದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಮುಕ್ರಂಪಾಡಿ ಸುಭದ್ರ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.

ಧಾರ್ಮಿಕ ಶಿಕ್ಷಣ: ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ೫ ರಿಂದ ೧೫ ವರ್ಷದೊಳಗಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣದ ಜೊತೆಗೆ ಆಟ, ಪಾಠದೊಂದಿಗೆ, ಸಂಬಂಧದ ಮಹತ್ವದ ಬಗ್ಗೆ ತಿಳುವಳಿಕೆಯನ್ನು ನೀಡಿ ಒಂದು ಉತ್ತಮ ವ್ಯಕ್ತಿತ್ವವನ್ನು ರೂಪಿಸುವ ಧಾರ್ಮಿಕ ಶಿಕ್ಷಣವನ್ನು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಸುಭದ್ರ ಸಭಾಭವನದ ಬಳಿಯಲ್ಲೂ ಧಾರ್ಮಿಕ ಶಿಕ್ಷಣವನ್ನು ನೀಡುವ ಉದ್ದೇಶವನ್ನು ಇಟ್ಟುಕೊಂಡಿದ್ದು ಆಸಕ್ತರು ಇದರಲ್ಲಿ ಭಾಗವಹಿಸುವಂತೆ ತಿಳಿಸಿ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯೆ ವೀಣಾ ರವರು ಮಾಹಿತಿ ನೀಡಿದರು.


ವೇದಮೂರ್ತಿ ಉದಯನಾರಾಯಣ ಕಲ್ಲು ರಾಯರ ನೇತೃತ್ವದ ವೈದಿಕ ತಂಡ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ಪದಾಧಿಕಾರಿಗಳು, ಸರ್ವ ಸದಸ್ಯರು, ವಿವಿಧ ಸಮಿತಿಯ ಸದಸ್ಯರುಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದು ಎಲ್ಲ ಕೆಲಸ ಕಾರ್ಯಗಳಲ್ಲಿ ಸಹಕರಿಸಿದರು


ಜಾಹೀರಾತು ಬಂದಿದೆ

LEAVE A REPLY

Please enter your comment!
Please enter your name here