![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಅಕ್ರಮ ಗೋ ಸಾಗಾಟ ತಡೆದು ಜಾನುವಾರುಗಳನ್ನು ಹಿಂದೂ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ ಘಟನೆ ಆರ್ಲಪದವಿನಲ್ಲಿ ನಡೆದ ಬಗ್ಗೆ ತಿಳಿದು ಬಂದಿದೆ.
![](https://puttur.suddinews.com/wp-content/uploads/2023/02/8eefb5f9-bc6d-4c37-9da9-c6d188d55874.jpg)
ಆಪೆ ವಾಹನದಲ್ಲಿ ಒಂದು ದನ ಮತ್ತು ಒಂದು ಗಂಡು ಕರುವನ್ನು ಅಕ್ರಮವಾಗಿ ಕೇರಳಕ್ಕೆ ಸಾಗಾಟ ಮಾಡುತ್ತಿದ್ದಾರೆ ಎಂದು ಹಿಂದೂ ಸಂಘಟನೆ ಕಾರ್ಯಕರ್ತರು ವಾಹನವನ್ನು ತಡೆದಿದ್ದು ಬಳಿಕ ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲರವರಿಗೆ ಮಾಹಿತಿ ನೀಡಿದ್ದಾರೆ.
![](https://puttur.suddinews.com/wp-content/uploads/2023/02/324cb57b-37b7-4b8e-ac5d-08b21ccf7364.jpg)
ಅರುಣ್ ಕುಮಾರ್ ಪುತ್ತಿಲರವರು ಸ್ಥಳಕ್ಕೆ ಆಗಮಿಸಿ ಮಾತುಕತೆ ನಡೆಸಿ, ದನಗಳನ್ನು ಪೊಲೀಸರಿಗೊಪ್ಪಿಸಲಾಗಿದ್ದು ಈ ಸ್ಥಳದಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.