ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್, ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ

0


ಕರ್ನಾಟಕ ಮಾಸ್ಟರ್ಸ್ ಆತ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಕೋಲಾರ ಪೊಲೀಸ್ ಕವಾಯತು ಕ್ರೀಡಾಂಗಣದಲ್ಲಿ ಫೆಬ್ರವರಿ 11 ಮತ್ತು 12ರಂದು ನಡೆದ ರಾಜ್ಯ ಮಟ್ಟದ 41ನೇ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಶಿಕ್ಷಕ, ಪುತ್ತೂರು ತಾಲೂಕು, ದರ್ಬೆತ್ತಡ್ಕದ ವೆಂಕಟೇಶ್ ಪ್ರಸಾದ್ ಇವರು 45ರ ವಯೋಮಾನ ವಿಭಾಗದ ಎತ್ತರ ಜಿಗಿತದಲ್ಲಿ ಪ್ರಥಮ, ಉದ್ದಜಿಗಿತದಲ್ಲಿ ತೃತೀಯ ಸ್ಥಾನ ಪಡೆದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಾರ್ಚ್ 27ರಿಂದ 30ರವರೆಗೆ ನಡೆಯುವ ರಾಷ್ಟ ಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here