ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಗೆ ಅಶೋಕ್‌ ರೈ ಆರ್ಥಿಕ ನೆರವು

0

ಪುತ್ತೂರು: ಕಳೆದ ಎರಡು ವಾರಗಳ ಹಿಂದೆ ಕುಂಬ್ರದಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಕುಂಬ್ರ ಕೆಪಿಎಸ್ ಸ್ಕೂಲ್ ವಿದ್ಯಾರ್ಥಿ ಕೊಯಿಲತ್ತಡ್ಕ ಜನತಾ ಕಾಲನಿ ನಿವಾಸಿ ಶಿಹಾಬ್ ಎಂಬಾತನಿಗೆ ಕಾಂಗ್ರೆಸ್ ಮುಖಂಡ ಕೋಡಿಂಬಾಡಿ ಅಶೋಕ್‌ರೈ ಯವರು ಆರ್ಥಿಕ ನೆರವು ನೀಡಿದರು.
ವಿದ್ಯಾರ್ಥಿ ಮನೆಗೆ ಭೇಟಿ ನೀಡಿದ ಅವರು ವಿದ್ಯಾರ್ಥಿಗೆ ಹಣಕಾಸಿನ ನೆರವು ನೀಡಿ, ಹೊಸ ಬಟ್ಟೆಗಳನ್ನು ಕೊಡಿಸುವುದಾಗಿ ಭರವಸೆ ನೀಡಿದರು. ಒಳಮೊಗ್ರು ವಲಯ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ ಪೂಜಾರಿ ಬೊಳ್ಳಾಡಿಯವರ ನೇತೃತ್ವದಲ್ಲಿ ವಿದ್ಯಾರ್ಥಿ ಕುಟುಂಬಕ್ಕೆ ನೆರವು ನೀಡಲಾಯಿತು. ರಾಕೇಶ್ ಬಡಗನ್ನೂರು, ಮಹಮ್ಮದ್ ಬೊಳ್ಳಾಡಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here