ರಾಜ್ಯ ಮಟ್ಟದ ವಿಶೇಷ ಚೇತನರ ಕ್ರೀಡಾಕೂಟ: ಹಿರೆಬಂಡಾಡಿ ಪ್ರೌಢಶಾಲೆಯ ಮಾನ್ಯ ಗುಂಡೆಸೆತದಲ್ಲಿ ಪ್ರಥಮ

0

ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪನಿರ್ದೇಶಕರ ಕಛೇರಿ, ಮಧುಗಿರಿ ಶೈಕ್ಷಣಿಕ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕೊರಟಗೆರೆ ಇದರ ವತಿಯಿಂದ ಕೊರಟಗೆರೆಯ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ವಿಶೇಷ ಚೇತನರ ಕ್ರೀಡಾಕೂಟದ 17 ವರ್ಷ ವಯೋಮಿತಿಯೊಳಗಿನ ವಿಭಾಗದಲ್ಲಿ ಹಿರೆಬಂಡಾಡಿ ಸರ್ಕಾರಿ ಪ್ರೌಢಶಾಲೆಯ ಮಾನ್ಯ ಗುಂಡೆಸೆತದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಗುಂಡೆಸೆತದಲ್ಲಿ ಪ್ರಥಮ ಸ್ಥಾನ ಹಾಗೂ ಈಟಿ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದರು. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಸೀತಾರಾಮ ಗೌಡ ಬಿ. ಇವರು ತರಬೇತಿ ನೀಡಿರುತ್ತಾರೆ. ಇವರು ಹಿರೆಬಂಡಾಡಿ ಸಿದ್ಯೊಟ್ಟು ದಿ. ಆನಂದ ಗೌಡ ಹಾಗೂ ವಿನಯ ದಂಪತಿಯ ಪುತ್ರಿಯಾಗಿದ್ದಾರೆ.

LEAVE A REPLY

Please enter your comment!
Please enter your name here