ಹರಿಣಾಕ್ಷಿ ಎಂ.ಡಿ. ಅವರಿಗೆ ಪಿಹೆಚ್.ಡಿ. ಪದವಿ

0

ಪುತ್ತೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮೈಸೂರು ಇಲ್ಲಿನ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಕವಿತಾ ರೈ ಅವರ ಮಾರ್ಗದರ್ಶನದಲ್ಲಿ ಹರಿಣಾಕ್ಷಿ ಎಂ.ಡಿ. ಅವರು “ದಕ್ಷಿಣ ಕನ್ನಡ ಜಿಲ್ಲೆಯ ಜನಪದ ಕಥೆಗಳಲ್ಲಿ ಮಹಿಳೆ” ಎಂಬ ವಿಷಯದ ಕುರಿತಾಗಿ ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ ಸಂಶೋಧನ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಲಭಿಸಿದೆ.

ಉಡುಪಿಯ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥೆಯಾಗಿರುವ ಅವರ ಪತಿ ಸೀತಾರಾಮ ಕೇವಳ  ಅವರು ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿದ್ದಾರೆ. ಹಿರಿಯ ಮಗ ಇಂಜಿನಿಯರ್ ಸುಜನ್ ಕೇವಳ ಉದ್ಯಮಿಯಾಗಿದ್ದು, ಕಿರಿಯ ಮಗ ಸುತನ್ ಕೇವಳ ಸ್ನಾತಕೋತ್ತರ ಪತ್ರಿಕೋದ್ಯಮ ವಿದ್ಯಾರ್ಥಿಯಾಗಿದ್ದಾರೆ. 

LEAVE A REPLY

Please enter your comment!
Please enter your name here