ಗೇರು ಒಂದು ಕಾಡುಬೆಳೆಯೆಂಬ ಮನಸ್ಥಿತಿಯಿಂದ ರೈತರು ಹೊರಬರಬೇಕಿದೆ- ಡಾ. ಆರ್ ಸಿ ಜಗದೀಶ್

0

ಪುತ್ತೂರು : ಮೊಟ್ಟೆತ್ತಡ್ಕದ ಐಸಿಏಆರ್ -ಡಿಸಿಆರ್ ಕೇಂದ್ರದಲ್ಲಿ ಆಯೋಜಿಸಲಾಗಿರುವ ಭಾರತೀಯ ಕೃಷಿ ಸಂಶೋಧನಾ ಪರಿಷತ್ ಪ್ರಾಯೋಜಿತ“ಸಮಗ್ರ ಕೀಟ ನಿರ್ವಹಣಾ ಕ್ರಮಗಳ ಪ್ರಾಮುಖ್ಯತೆಯೊಂದಿಗೆ ಸುಧಾರಿತ ಗೇರು ಉತ್ಪಾದಕತಾ ತಂತ್ರಜ್ಞಾನ” ದ ಕುರಿತ ರಾಷ್ಟ್ರಮಟ್ಟದ ಒಂದು ವಾರದ ತರಬೇತಿ ಕಾರ್ಯಕ್ರಮವನ್ನು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆರ್ ಸಿ ಜಗದೀಶರವರು ಉದ್ಘಾಟಿಸಿದರು.

ಆ ಬಳಿಕ ಮಾತನಾಡಿ “ಗೇರು ಕಾಡುಬೆಳೆಯಲ್ಲ ಅದೊಂದು ತೋಟಗಾರಿಕಾ ಬೆಳೆಯಾಗಿದೆ, ಇನ್ನಿತರ ತೋಟಗಾರಿಕಾ ಬೆಳೆಗಳಿಗೆ ಒದಗಿಸುವಂತಹ ಕೃಷಿ ನಿರ್ವಹಣಾ ಕ್ರಮಗಳನ್ನು ಗೇರು ಬೇಸಾಯದಲ್ಲೂ ಅಳವಡಿಸಿಕೊಂಡಲ್ಲಿ ಖಂಡಿತವಾಗಿಯೂ ಗೇರು ಉತ್ಪಾದಕತೆಯಲ್ಲಿ ಗಣನೀಯವಾದ ಪ್ರಗತಿಯನ್ನು ಸಾಧಿಸಲು ಸಾಧ್ಯ”ವೆಂದು ಹೇಳಿದರು.

ಡಾ. ಕೆ ವನಿತಾ ರವರು ಸಂಸ್ಥೆಯ ಹಿರಿಯ ವಿಜ್ಞಾನಿ (ಕೀಟಶಾಸ್ತ್ರ) ಅತಿಥಿಗಳು, ಸಭಿಕರು ಮತ್ತು ಡಿಸಿಆರ್ ಮತ್ತು ಸಿ ಪಿ ಸಿ ಆರ್ ಐ ಕೇಂದ್ರದ ಸಿಬ್ಬಂದಿಗಳನ್ನು ಸ್ವಾಗತಿಸಿದರು. ಡಾ. ಹೆಚ್. ರಾಜಶೇಖರ ವಿಜ್ಞಾನಿ (ಸಸ್ಯ ರೋಗಶಾಸ್ತ್ರ), ತರಬೇತಿ ಮತ್ತು ಅದರ ಉಪಯುಕ್ತತೆಯ ಕುರಿತಂತೆ ಸಂಕ್ಷಿಪ್ತವಾಗಿ ಸಭೆಗೆ ವಿವರಿಸಿದರು. ಡಾ. ಟಿ ಎನ್, ರವಿಪ್ರಸಾದ್,ಪ್ರಧಾನ ವಿಜ್ಞಾನಿ (ಕೀಟಶಾಸ್ತ್ರ) ರವರು ತರಭೇತಿಗೆ ಸಂಬಂಧಿಸಿದಂತೆ ತರಬೇತಿ ಕಾರ್ಯಕ್ರಮವು ಒಳಗೊಂಡಂತಹ ಅಂಶಗಳ ಕುರಿತಾಗಿ ಮಾಹಿತಿಗಳನ್ನು ಸಭಿಕರಿಗೆ ಒದಗಿಸಿದರು ಮತ್ತು ಕಾರ್ಯಕ್ರಮದಲ್ಲಿ ಭಾಗವಹಿಸಿದ ಅಭ್ಯರ್ಥಿಗಳು ಚರ್ಚೆಯ ಮೂಲಕ ತಮ್ಮ ತಮ್ಮ ಸಂದೇಹಗಳನ್ನು ಪರಿಹರಿಸಿಕೊಳ್ಳುವಂತೆ ಕೋರಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಿಂದ ತರಬೇತಿಗೆ ಸಂಬಂಧಿಸಿದ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಗೇರು ಕೃಷಿ ಸಂಶೋಧನೆಯಲ್ಲಿ ಧೀರ್ಘ ಅನುಭವವನ್ನು ಹೊಂದಿರುವ ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆರ್ ಸಿ ಜಗದೀಶರವರು ಗೇರು ಕೃಷಿಯ ಕುರಿತಂತೆತಮ್ಮ ಅನುಭವಗಳನ್ನು ಸಭಿಕರು ಮತ್ತು ತರಬೇತಿದಾರರೊಂದಿಗೆ ಹಂಚಿಕೊಂಡರು.

ಐಸಿಏಆರ್ –ಡಿಸಿಆರ್ ಸಂಸ್ಥೆಯ ನಿರ್ದೇಶಕರಾದ ಡಾ. ಜೆ. ದಿನಕರ ಅಡಿಗರವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಸಂಸ್ಥೆಯಲ್ಲಿ ನಡೆಯುತ್ತಿರುವ ಗೇರು ಸಂಶೋಧನಾ ಚಟುವಟಿಕೆಗಳ ಕುರಿತಂತೆ ವಿವರಿಸಿದರು ಮತ್ತು ಮುಖ್ಯ ಅತಿಥಿಯಾಗಿ ಆಗಮಿಸಿದ ಕೃಷಿ ವಿವಿ ಉಪಕುಲಪತಿ ಡಾ ಆರ್ ಜಗದೀಶರವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಡಾ. ವೀಣಾ ಜಿ ಎಲ್ ರವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಡಾ. ಹೆಚ್ ರಾಜಶೇಖರರವರ ವಂದಿಸಿದರು.

LEAVE A REPLY

Please enter your comment!
Please enter your name here