ಮರ್ದಾಳ: ರಬ್ಬರ್ ತೋಟ ಬೆಂಕಿಗಾಹುತಿ

0

ಮರ್ದಾಳ: ಇಲ್ಲಿನ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಯ ಸಮೀಪದ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ರಬ್ಬರ್ ಮರಗಳು ಬೆಂಕಿಗಾಹುತಿಯಾಗಿರುವ ಘಟನೆ ಫೆ.13ರಂದು ಮಧ್ಯಾಹ್ನ ನಡೆದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿಯ ಕೆನ್ನಾಲಗೆ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಯ ರಬ್ಬರ್ ತೋಟಕ್ಕೆ ಹಾಗೂ ಪಕ್ಕದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ಮಠದ ಜಾಗಕ್ಕೆ ವ್ಯಾಪಿಸಿದೆ. ಇದರಿಂದಾಗಿ ಜಾಗದಲ್ಲಿದ್ದ ರಬ್ಬರ್ ಮರಗಳು ಬೆಂಕಿಗಾಹುತಿಯಾಗಿವೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಸ್ಥಳೀಯರು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ಆಗದಂತೆ ತಡೆದಿದ್ದಾರೆ.

LEAVE A REPLY

Please enter your comment!
Please enter your name here