ಹಿರಿಯರ ಕ್ರೀಡಾಕೂಟ; ಐತ್ತೂರಿನ ಭಾಸ್ಕರ ಗೌಡ ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಮರ್ದಾಳ: ಕೋಲಾರದಲ್ಲಿ ನಡೆದ ರಾಜ್ಯಮಟ್ಟದ 41ನೇ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕಡಬ ತಾಲೂಕು ಐತ್ತೂರು ಗ್ರಾಮದ ಮಾಳ ನಿವಾಸಿ ಭಾಸ್ಕರ ಗೌಡರವರು 200 ಮೀ.ಓಟ ಹಾಗೂ ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಭಾಸ್ಕರ ಗೌಡರವರು 200 ಮೀ.ಓಟದಲ್ಲಿ ಪ್ರಥಮ ಹಾಗೂ 400 ಮೀ.ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. 1500 ಮೀ. ಹಾಗೂ 400 ಮೀ.ಓಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಐತ್ತೂರು ಗ್ರಾಮದ ಮಾಳ ನಿವಾಸಿ ಶೀನಪ್ಪ ಗೌಡರವರ ಪುತ್ರ. ರಾಷ್ಟ್ರಮಟ್ಟದ ಕ್ರೀಡಾಕೂಟ ಬೆಂಗಳೂರಿನಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here