ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಿಯ ಜಾತ್ರೋತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ನಿಡ್ಪಳ್ಳಿ: ಶ್ರೀ ಶಾಂತದುರ್ಗಾ ದೇವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ ಇದರ ಪ್ರತಿಷ್ಟಾ ಮಹೋತ್ಸವ ಹಾಗೂ ಜಾತ್ರೋತ್ಸವ ಕಾರ್ಯಕ್ರಮ ಮಾ.14 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಫೆ.13 ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಚುನಾವಣಾ ಇಲಾಖೆಯ ನಿವೃತ್ತ ಅಧಿಕಾರಿ ಶಂಭು ಭಟ್ ದೇವಮಣಿ ಆಮಂತ್ರಣ ಪತ್ರ ಬಿಡುಗಡೆ ಗೊಳಿಸಿದರು.

ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾರಾಯಣ ರೈ ಕೊಪ್ಪಳ ಹಾಗೂ ಆಡಳಿತ ಮಂಡಳಿ ಸದಸ್ಯರು, ಪ್ರಧಾನ ಅರ್ಚಕ ನವೀನ್ ಹೆಬ್ಬಾರ್ ಮತ್ತು ಊರ ಭಕ್ತಾದಿಗಳು ಉಪಸ್ಥಿತರಿದ್ದರು.

ಆಡಳಿತ ಮಂಡಳಿಯ ನಿಕಟ ಪೂರ್ವ ಅಧ್ಯಕ್ಷ ನಾಗೇಶ ಗೌಡ ಪುಳಿತ್ತಡಿ ಸ್ವಾಗತಿಸಿ ವಂದಿಸಿದರು. 

LEAVE A REPLY

Please enter your comment!
Please enter your name here