ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ಕ್ರೀಡಾಕೂಟ : ಬೆಟ್ಟಂಪಾಡಿ ಪ್ರೌಢಶಾಲೆಯ ರೀತಾಶ್ರೀ ರಾಷ್ಟ್ರ ಮಟ್ಟಕ್ಕೆ ಆಯ್ಕೆ

0

ನಿಡ್ಪಳ್ಳಿ;ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿದೇ೯ಶಕರ ಕಛೇರಿ, ಮಧುಗಿರಿ ಶೈಕ್ಷಣಿಕ ಜಿಲ್ಲೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕೊರಟಗೆರೆ ಇದರ ವತಿಯಿಂದ ಕೊರಟಗೆರೆ ಕ್ರೀಡಾಂಗಣದಲ್ಲಿ  ಜರುಗಿದ 2022 -23 ರ ರಾಜ್ಯ ಮಟ್ಟದ ವಿಶೇಷ ಚೇತನರ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಬೆಟ್ಟಂಪಾಡಿ ಇಲ್ಲಿಯ 9ನೇ ತರಗತಿ ವಿದ್ಯಾರ್ಥಿನಿ ರೀತಾಶ್ರೀ ಈಟಿ ಎಸೆತ ಸ್ಪರ್ಧೆಯಲ್ಲಿ  ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾರೆ. ಈಕೆಗೆ ದೈಹಿಕ ಶಿಕ್ಷಣ ಶಿಕ್ಷಕಿ  ಚಂದ್ರಕಲಾ ಕೆ.ವಿ. ತರಬೇತಿ ನೀಡಿರುತ್ತಾರೆ.

ಈಕೆ ನಿಡ್ಪಳ್ಳಿ ಗ್ರಾಮದ ಮುಂಡೂರು ನಿವಾಸಿ ಮಹಾಲಿಂಗ ನಾಯ್ಕ ಮತ್ತು ಶಶಿಕಲಾ ದಂಪತಿಗಳ ಪುತ್ರಿ ಹಾಗೂ ನಿಡ್ಪಳ್ಳಿ ಸ.ಹಿ.ಪ್ರಾ.ಶಾಲೆ ಮುಂಡೂರು- 1 ಇಲ್ಲಿನ  ಹಿರಿಯ ವಿದ್ಯಾರ್ಥಿನಿಯಾಗಿರುತ್ತಾಳೆ ಎಂದು ಶಾಲಾ ಮುಖ್ಯಗುರು ವಿಜಯ ಕುಮಾರ್ ಎಂ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here