ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಸಂಪನ್ನ

0

ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವವು ಫೆ.14ರಂದು ಸಂಪನ್ನಗೊಂಡಿತು. ಫೆ.14ರಂದು ಬೆಳಗ್ಗೆ ಶ್ರೀ ದೇವರ ಬಲಿ ಉತ್ಸವ, ಶ್ರೀದೇವರ ದರ್ಶನ ಬಲಿ, ಬಟ್ಟಲುಕಾಣಿಕೆ, ಮಹಾಮಂಗಳಾರತಿ, ಮಂತ್ರಾಕ್ಷತೆ ನಡೆದ ಬಳಿಕ ಅನ್ನಸಂತರ್ಪಣೆ ನಡೆಯಿತು. ಮಧ್ಯಾಹ್ನ ಮಹಾಪೂಜೆಯ ಬಳಿಕ ಸಂಪ್ರದಾಯದಂತೆ ಮಕ್ಕಳಿಗೆ ಹಾಗು ಯುವಕರಿಗೆ ತಪ್ಪಂಗಾಯಿ ಸ್ಪರ್ಧೆ ನಡೆಯಿತು.

ಆರು ವರ್ಷಗಳಿಂದ ಕ್ಷೇತ್ರದಲ್ಲಿ ಹಾಗೂ ಮಲರಾಯ ಮೂವರ್ ದೈವಂಗಳ ದೈವಸ್ಥಾನದಲ್ಲಿ ಸೇವೆ ಸಲ್ಲಿಸಿದ ಗಣೇಶ ಭಟ್ ರವರನ್ನು ದೇವಾಲಯ ಹಾಗೂ ಕುಳ -ವಿಟ್ಲ ಮೂಡ್ನೂರು ಗ್ರಾಮಸ್ಥರ ವತಿಯಿಂದ ಗೌರವಿಸಲಾಯಿತು.

LEAVE A REPLY

Please enter your comment!
Please enter your name here