ನೆಲ್ಯಾಡಿ: ಡಾ| ಜೈನಿ ಶಾಜಿ ಸ್ಮರಣಾರ್ಥ ರಕ್ತದಾನ ಶಿಬಿರ

0

ನೆಲ್ಯಾಡಿ: ಸಿಟಿ ಫ್ರೆಂಡ್ಸ್ ನೆಲ್ಯಾಡಿ, ಲೇಡಿಗೋಷನ್ ಆಸ್ಪತ್ರೆ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಹಾಗೂ ಕಿರಣ್ ಮಹಿಳಾ ಒಕ್ಕೂಟ ಕಡಬ ತಾಲೂಕು ಇದರ ಸಂಯುಕ್ತಾಶ್ರಯದಲ್ಲಿ ಡಾ| ಜೈನಿ ಶಾಜಿ ಸ್ಮರಣಾರ್ಥ ರಕ್ತದಾನ ಶಿಬಿರ ಫೆ.14ರಂದು ನೆಲ್ಯಾಡಿ ಎಲೈಟ್ ಬಿಲ್ಡಿಂಗ್‌ನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಅನ್ನಮ್ಮ ವರ್ಗೀಸ್‌ರವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಿಶಿರ ಅವರು ಮಾತನಾಡಿ, ರಕ್ತದಾನ ಮಾಡುವ ಮೂಲಕ ಒಂದು ಜೀವ ಉಳಿಸುವಂತಹ ಶ್ರೇಷ್ಠ ಕಾರ್ಯವನ್ನು ಮಾಡಬಹುದಾಗಿದೆ. ಆರೋಗ್ಯ ದೃಷ್ಟಿಯಿಂದ ರಕ್ತದಾನ ಮಾಡುವುದು ಉತ್ತಮ ಎಂದರು. ಮುಖ್ಯ ಅತಿಥಿಯಾಗಿದ್ದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಇದರ ಜಿಲ್ಲಾ ಸಂಯೋಜಕ ಪ್ರವೀಣ್‌ಕುಮಾರ್‌ರವರು ಮಾತನಾಡಿ, ರಕ್ತಕ್ಕೆ ಜಾತಿ ಧರ್ಮ ಇಲ್ಲ, ರಕ್ತದ ಅವಶ್ಯಕತೆ ಬಂದಾಗ ಯಾವುದೇ ಜಾತಿಯ ವ್ಯಕ್ತಿಯ ರಕ್ತವು ಆಗುತ್ತದೆ. ಸಹಬಾಳ್ವೆ, ಸಾಮರಸ್ಯದ ಜೀವನಕ್ಕೆ ರಕ್ತದಾನವು ಭದ್ರ ಬುನಾದಿಯಾಗಿದೆ. ಆದ್ದರಿಂದ ರಕ್ತದಾನ ಶಿಬಿರ ನಿರಂತರವಾಗಿ ನಡೆಯುತ್ತಿರಬೇಕೆಂದು ಹೇಳಿದರು.

ಜಿ.ಪಂ.ಮಾಜಿ ಸದಸ್ಯರಾದ ಸರ್ವೋತ್ತಮ ಗೌಡ, ಬಾಲಕೃಷ್ಣ ಬಾಣಜಾಲು, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಎಸ್.ಗೌಡ ಇಚ್ಲಂಪಾಡಿ, ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಉಷಾ ಅಂಚನ್, ನೆಲ್ಯಾಡಿ ಬಿಜೆಎಂ ಅಧ್ಯಕ್ಷ, ನೋಟರಿ ನ್ಯಾಯವಾದಿ ಇಸ್ಮಾಯಿಲ್ ಎನ್., ಉದ್ಯಮಿ ಕೆ.ಪಿ.ತೋಮಸ್, ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷೆ ಚೇತನಾ, ಪಿಡಿಒ ಮಂಜುಳ ಎನ್., ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯ ನಿರ್ದೇಶಕ ಡಾ.ಮುರಳೀಧರ, ಕೌಕ್ರಾಡಿ ಗ್ರಾ.ಪಂ.ಅಧ್ಯಕ್ಷೆ ವನಿತಾ, ನೆಲ್ಯಾಡಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಮಂಜುಳ ಎನ್. ರವರು ಸಂದರ್ಭೋಚಿತವಾಗಿ ಮಾತನಾಡಿ ಶುಭಹಾರೈಸಿದರು. ನೆಲ್ಯಾಡಿ ಎಲೈಟ್ ಗ್ರೂಫ್‌ನ ಮಾಲಕ ಶಾಜಿ ವರ್ಗೀಸ್ ಸ್ವಾಗತಿಸಿ, ಕೌಕ್ರಾಡಿ ಗ್ರಾ.ಪಂ.ಸದಸ್ಯ ಲೋಕೇಶ್ ಬಾಣಜಾಲು ವಂದಿಸಿದರು. ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯ ಶಿಕ್ಷಕಿ ಜೆಸಿಂತಾ ನಿರೂಪಿಸಿದರು. ನೆಲ್ಯಾಡಿ ಗ್ರಾ.ಪಂ.ಸದಸ್ಯ ಮೊಹಮ್ಮದ್ ಇಕ್ಬಾಲ್ ಹಾಗೂ ಇತರರು ಸಹಕರಿಸಿದರು.

107 ಯುನಿಟ್ ರಕ್ತ ಸಂಗ್ರಹ: ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ನೆಲ್ಯಾಡಿ ಬೆಥನಿ ಐಟಿಐ ಹಾಗೂ ಪದವಿ ವಿದ್ಯಾರ್ಥಿಗಳು, ಸಾರ್ವಜನಿಕರು ರಕ್ತದಾನ ಮಾಡಿದರು. ಸುಮಾರು 107 ಯುನಿಟ್ ರಕ್ತ ಸಂಗ್ರಹಿಸಲಾಯಿತು. 38 ಬಾರಿ ರಕ್ತದಾನ ಮಾಡಿದ ಜೋಸ್ ಕೆ.ಜೆ.ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here