ಕಾಂಚನ-ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೆ, ಉತ್ಸವ

0

ನೆಲ್ಯಾಡಿ: ಗ್ರಾಮ ದೇವರಾದ ಕಾಂಚನ-ನಡ್ಪ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರೆ ಪ್ರಯುಕ್ತ ಫೆ.13 ಹಾಗೂ 14ರಂದು ಉತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.


ಫೆ.13 ರಂದು ರಾತ್ರಿ ಚಕ್ರವರ್ತಿ ಕೊಡಮಣಿತ್ತಾಯ ಮತ್ತು ಗ್ರಾಮ ದೈವ ಶಿರಾಡಿ ದೈವದ ಭಂಡಾರ ತರಲಾಯಿತು. ಬಳಿಕ ಶ್ರೀ ದೇವರಿಗೆ ರಂಗಪೂಜೆ ಹಾಗೂ ಪಂಜುರ್ಲಿ ಮತ್ತು ಗ್ರಾಮ ದೈವಗಳಿಗೆ ಕೊಡಿನಾಡಿನಲ್ಲಿ ತಂಬಿಲ ಸೇವೆ ನಡೆಯಿತು. ರಾತ್ರಿ ಶ್ರೀ ದೇವರ ಬಲಿ ಹೊರಡುವುದು, ಪಂಚವಾದ್ಯ ಸೇವೆ, ಅಶ್ವತ್ಥ ಕಟ್ಟೆಪೂಜೆ, ಉತ್ಸವ, ವಸಂತ ಕಟ್ಟೆಪೂಜೆ, ನೃತ್ಯ ಬಲಿ ನಡೆಯಿತು. ನಂತರ ಅನ್ನಸಂತರ್ಪಣೆ ನಡೆಯಿತು.

ಫೆ.14ರಂದು ಬೆಳಿಗ್ಗೆ ಗಣಪತಿ ಹೋಮ, ಕಲಶಾಭಿಷೇಕ, ಗಣಪತಿ ದೇವರಿಗೆ ಅಪ್ಪಸೇವೆ ನಡೆಯಿತು. ನಂತರ ಶ್ರೀ ದೇವರ ದರ್ಶನ ಬಲಿ ಉತ್ಸವ, ಬಟ್ಟಲುಕಾಣಿಕೆ, ಮಧ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಪಂಜುರ್ಲಿ ದೈವಕ್ಕೆ ತಂಬಿಲ, ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರಾದ ಕಾಂಚನ ರೋಹಿಣಿ ಸುಬ್ಬರತ್ನಂ, ಅರ್ಚಕರು, ಮೊಕ್ತೇಸರರೂ ಆದ ನಾರಾಯಣ ಬಡೆಕ್ಕಿಲ್ಲಾಯ, ದೇವಸ್ಥಾನದ ಟ್ರಸ್ಟ್‌ನ ಗೌರವಾಧ್ಯಕ್ಷರಾದ ಎ.ಸುಂದರ ಗೌಡ ಸಚಿನ್, ಅಧ್ಯಕ್ಷ ಶ್ರೀಧರ ಗೌಡ ಶ್ರೀಹರಿ ನಡ್ಪ, ಉಪಾಧ್ಯಕ್ಷ ಶಿವರಾಮ ಕಾರಂತ ಉರಾಬೆ, ಕಾರ್ಯದರ್ಶಿ ಸುಧಾಕೃಷ್ಣ ಪಿ.ಎನ್., ಜೊತೆ ಕಾರ್ಯದರ್ಶಿ ಕುಶಾಲಪ್ಪ ಗೌಡ ಬಜತ್ತೂರುಗುತ್ತು, ಕೋಶಾಧಿಕಾರಿ ಜಗದೀಶ ರಾವ್ ಮಣಿಕ್ಕಳ, ಲೆಕ್ಕಪರಿಶೋಧಕ ಶಿವಣ್ಣ ಗೌಡ ಗುರುಮನೆ ಬಿದಿರಾಡಿ, ಟ್ರಸ್ಟಿಗಳಾದ ಕೆ.ವಿ.ಕಾರಂತ ಪ್ರಸನ್ನ ನಿಲಯ ಉರಾಬೆ, ಲೋಕೇಶ ಗೌಡ ಬಜತ್ತೂರು, ದುಗ್ಗಪ್ಪ ಗೌಡ ಅಗರ್ತಿಮಾರು, ಸುಮನ ಬಡೆಕ್ಕಿಲ್ಲಾಯ, ಉಪಟ್ರಸ್ಟಿಗಳಾದ ಸುರೇಶ್ ಬಿದಿರಾಡಿ, ಪ್ರಸನ್ನ ಕಾರಂತ್, ಯಾದವ ಗೌಡ, ನೋಣಯ್ಯ ಗೌಡ, ಎಲ್ಯಣ್ಣ ಗೌಡ, ದಿನೇಶ್ ನಡ್ಪ, ಶಿವರಾಮ ಪ್ರಸಾದ್ ಬಜತ್ತೂರು, ಕಿಶೋರ್ ಬಜತ್ತೂರು ಸೇರಿದಂತೆ ಶ್ರೀ ವಿಷ್ಣುಮೂರ್ತಿ ಶಾಶ್ವತ ಮಹಾಸಮಿತಿ, ಶ್ರೀ ವಿಷ್ಣುಮೂರ್ತಿ ಶಾಶ್ವತ ಉಪಸಮಿತಿ, ಶ್ರೀ ವಿಷ್ಣುಮೂರ್ತಿ ಭಜನಾ ಸಂಘ, ಧನುಪೂಜಾ ಸಮಿತಿ ಪದಾಧಿಕಾರಿಗಳು, ಸದಸ್ಯರು, ಊರಿನ ಭಗವದ್ಭಕ್ತರು, ಗುತ್ತು ಬಾರಿಕೆಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here