ಫೆ.18: ಸವಣೂರಿನಲ್ಲಿ ರೋಟರಿ ಜಿಲ್ಲೆ 3181ರ ಕ್ಲಬ್ ಪೂರ್ವಾಧ್ಯಕ್ಷರುಗಳ ಸಮ್ಮೇಳನ `ಸಮನ್ವಯ’

0

ಪುತ್ತೂರು: ಅಂತರ್ರಾಷ್ಟ್ರೀಯ ರೋಟರಿ ಸಂಸ್ಥೆಯ ರೋಟರಿ ಜಿಲ್ಲೆ 3181ರ ವ್ಯಾಪ್ತಿಯಲ್ಲಿರುವ ದ.ಕ., ಉಡುಪಿ, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳ ರೋಟರಿ ಕ್ಲಬ್ ಪೂರ್ವಾಧ್ಯಕ್ಷರುಗಳ ಸಮ್ಮೇಳನ `ಸಮನ್ವಯ’ ಹೆಸರಿನಲ್ಲಿ ಫೆ.18ರಂದು ಸವಣೂರಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಆಡಿಟೋರಿಯಂನಲ್ಲಿ ನಡೆಯಲಿದೆ.


ಅಪರಾಹ್ನ 1.30 ಕ್ಕೆ ಆರಂಭಗೊಳ್ಳುವ ಸಮ್ಮೇಳನವು ಸಂಜೆ ಮುಕ್ತಾಯಗೊಳ್ಳಲಿದೆ. ಸಮ್ಮೇಳನದ ಅಧ್ಯಕ್ಷತೆಯನ್ನು ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ವಹಿಸಲಿದ್ದಾರೆ. ರೋಟರಿ ಪೂರ್ವಾಧ್ಯಕ್ಷರುಗಳ ಸಂಸ್ಥೆಯ ಜಿಲ್ಲಾಧ್ಯಕ್ಷ ಸೀತಾರಾಮ ರೈ ಸವಣೂರು ಗೌರವ ಅತಿಥಿಯಾಗಿ ಪಾಲ್ಗೊಳ್ಳುವರು.


ಸಂಪನ್ಮೂಲ ವ್ಯಕ್ತಿಗಳಾಗಿ ರೋಟರಿ ಜಿಲ್ಲಾ ಪೂರ್ವ ಗವರ್ನರ್‌ಗಳಾದ ಡಾ| ಭಾಸ್ಕರ ಎಸ್., ಸುರೇಶ್ ಚಂಗಪ್ಪ, ರೋಟರಿ ಜಿಲ್ಲೆ 3182ರ ಪೂರ್ವ ಗವರ್ನರ್ ಅಭಿನಂದನ್ ಶೆಟ್ಟಿ ಹಾಗೂ ಜಿಲ್ಲಾ ಸಹ ತರಬೇತುದಾರ ಶೇಖರ್ ಶೆಟ್ಟಿ ಭಾಗವಹಿಸುವರು. ಸುಳ್ಯ ರೋಟರಿ ಕ್ಲಬ್ ಈ ಕಾರ್ಯಕ್ರಮದ ಆತಿಥ್ಯ ವಹಿಸಲಿದೆ. ಎಲ್ಲಾ ಕ್ಲಬ್ ಪೂರ್ವಾಧ್ಯಕ್ಷರುಗಳು ಭಾಗವಹಿಸಬೇಕೆಂದು ಪೂರ್ವಾಧ್ಯಕ್ಷರುಗಳ ಸಂಸ್ಥೆಯ ಜಿಲ್ಲಾಧ್ಯಕ್ಷ ಕೆ.ಸೀತಾರಾಮ ರೈ ಸವಣೂರು, ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ಪೇರಾಲು, ಕಾರ್ಯದರ್ಶಿ ಮಧುರಾ ಎಂ.ಆರ್. ವಿನಂತಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here