ಚೆಕ್ ಅಮಾನ್ಯ-ಆರೋಪಿಯ ಬಂಧನ

0

ಪುತ್ತೂರು:ಚೆಕ್ ಅಮಾನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಶಾಂತಿಗೋಡು ನಿವಾಸಿ ರಾಮಣ್ಣ ಶೆಟ್ಟಿಯವರ ಪುತ್ರ ಅಕ್ಷಿತ್ ಶೆಟ್ಟಿ ಬಂಧಿತ ಆರೋಪಿ. 2015ರಲ್ಲಿ ನಡೆದ ಬನ್ನೂರು ನೆಕ್ಕಿಲ ನಿವಾಸಿಯೊಬ್ಬರ ಹಣದ ವ್ಯವಹಾರಕ್ಕೆ ಸಂಬಂಧಿಸಿ ಈತ ನೀಡಿದ ಚೆಕ್ ಅಮಾನ್ಯಗೊಂಡಿತ್ತು. ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಇರುವುದರಿಂದ ಆತನ ಬಂಧನಕ್ಕೆ ವಾರಂಟ್ ಜಾರಿಯಾಗಿತ್ತು. ಆರೋಪಿಯನ್ನು ಫೆ.13ರಂದು ನಗರ ಠಾಣಾ ಸಿಬ್ಬಂದಿಗಳಾದ ಪರಮೇಶ್ವರ ಮತ್ತು ಗಿರಿಪ್ರಶಾಂತ್‌ರವರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆರೋಪಿಯನ್ನು ಫೆ.14ರಂದು ನ್ಯಾಯಾಲಯವು ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.

LEAVE A REPLY

Please enter your comment!
Please enter your name here