ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ- ಖಾವಂದರಿಗೆ ಆಹ್ವಾನ

0

ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವು ಮಾ.8 ರಿಂದ ಮಾ.13 ರವರೆಗೆ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರಿಗೆ ನೀಡಿ ಧಾರ್ಮಿಕ ಸಭಾಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿಯ ಉಪಾಧ್ಯಕ್ಷ ಬೈಲುಗುತ್ತು ಮಾರಪ್ಪ ಶೆಟ್ಟಿ, ಬ್ರಹ್ಮಕಲಶದ ಸ್ವಾಗತ ಸಮಿತಿಯ ಅಧ್ಯಕ್ಷ ಪ್ರೀತಮ್ ಪೂಂಜಾ ಆಗ್ರಾಳ, ಕಾರ್ಯದರ್ಶಿ ರವೀಶ್ ಪೊಸವಳಿಕೆ, ಸ್ವಚ್ಛತಾ ಸಮಿತಿಯ ಅಧ್ಯಕ್ಷರಾದ ಗುರುವಪ್ಪ ಪೂಜಾರಿ ದಲ್ಕಜೆಗುತ್ತು, ಕಾರ್ಯಕಾರಿ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್ ಕಲ್ಲಾಜೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here