ಅಂಡ ತುಂಬಿದ ಲಾರಿ ಹೊಂಡಕ್ಕೆ; ಲಾರಿಯಲ್ಲಿದ್ದವರು ಅಪಾಯದಿಂದ ಪಾರು

0

ಆಲಂಕಾರು: ಮೈಸೂರು – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಶರವೂರು ಭದ್ರಕಾಳಿ ಗುಡಿಯ ಬಳಿ ಮೊಟ್ಟೆ ಸಾಗಿಸುತ್ತಿದ್ದ ಲಾರಿಯೊಂದು ಮೋರಿಗೆ ಗುದ್ದಿ ಹೊಂಡಕ್ಕೆ ಬಿದ್ದ ಘಟನೆ ಫೆ.15ರಂದು ಬೆಳಗ್ಗಿನ ಜಾವ ನಡೆದಿದೆ. ಲಾರಿಯಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ತಮ್ಮ ತವರು ಜಿಲ್ಲೆ ಮೈಸೂರಿಗೆ ತೆರಳಿರುವುದಾಗಿ ಮಾಹಿತಿ ದೊರಕಿದೆ.

ಲಾರಿ ಅಪಘಾತದ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ಯಾವುದೇ ವಾಹನ ಇಲ್ಲದಿದ್ದ ಕಾರಣ ಹೆಚ್ಚಿನ ಅಪಾಯ ಸಂಭವಿಸಿಲ್ಲ.


ಸಾರ್ವಜನಿಕರಿಂದ ಅಕ್ರೋಶ : ಇಲ್ಲಿ ಹಲವು ಬಾರಿ ಅಪಘಾತಗಳು ಸಂಭವಿಸಿದ್ದು ಅಪಾಯಕಾರಿ ತಿರುವನ್ನು ತೆರವುಗೊಳಿಸುವಂತೆ ಸುದ್ದಿ ಬಿಡುಗಡೆ ಪತ್ರಿಕೆ ಹಲವು ಬಾರಿ ವರದಿ ಮಾಡಿ ಸಂಬಂಧಪಟ್ಟವರ ಗಮನ ಸೆಳೆದಿತ್ತು. ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಇಂತಹ ಅಪಘಾತಗಳು ಸಂಭವಿಸುತ್ತಿದ್ದು ಇನ್ನಾದರೂ ಸಂಬಂಧಪಟ್ಟವರು ಅಪಾಯಕಾರಿ ತಿರುವಿನ ಇಕ್ಕೆಲದ ಮಣ್ಣು ತೆಗೆದು ಸುಗಮ ಸಂಚಾರಕ್ಕೆ ಅನುವಾಗುವಂತೆ ಮಾಡಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here