ಫೆ.17: ಸುದಾನ ಶಾಲೆಯಲ್ಲಿ ಕಿಂಡರ್ ಕೇರ್ ಘಟಿಕೋತ್ಸವ, ಹಿರಿಯ ವಿದ್ಯಾರ್ಥಿಗಳ ದಿನ

0

ಪುತ್ತೂರು: ನೆಹರುನಗರದಲ್ಲಿನ ಸುದಾನ ವಸತಿಯುತ ಶಾಲೆಯಲ್ಲಿ ಕಿಂಡರ್ ಕೇರ್ ಘಟಿಕೋತ್ಸವ ಮತ್ತು 2022-23ನೇ ಸಾಲಿನ ಹಿರಿಯ ವಿದ್ಯಾರ್ಥಿಗಳ ದಿನಾಚರಣೆಯು ಫೆ.17 ರಂದು ಸುದಾನ ಉದ್ಯಾನ ಆವರಣದಲ್ಲಿ ಸಂಜೆ ಜರಗಲಿದೆ.

ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್‌ರವರು ಕಾರ್ಯಕ್ರಮದ ಮೊಡರೇಟರ್ ಆಗಿ, ವಿವೇಕಾನಂದ ಪದವಿ ಅಡ್ವಾನ್ಸ್ ಅಧ್ಯಯನ ಕೇಂದ್ರದ ಪ್ರೊಫೆಸರ್ ಹಾಗೂ ಡೀನ್ ಡಾ|ವಿಜಯ ಸರಸ್ವತಿ ಬಿರವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಸುದಾನ ಶಾಲೆಯ ಮುಖ್ಯ ಶಿಕ್ಷಕಿ ಶೋಭಾ ನಾಗಾರಾಜುರವರು ವಹಿಸಿಕೊಳ್ಳಲಿದ್ದಾರೆ. ಬಳಿಕ ಸುದಾನ ಕೆ.ಜಿ ಕಿಡ್ಸ್, ಸಿಬ್ಬಂದಿ ಹಾಗೂ ಸುದಾನ ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ ಎಂದು ಸುದಾನ ಶಾಲೆಯ ಸಂಚಾಲಕ ರೆ|ವಿಜಯ ಹಾರ್ವಿನ್, ಕಾರ್ಯದರ್ಶಿ ಡಾ|ಪೀಟರ್ ವಿಲ್ಸನ್ ಪ್ರಭಾಕರ್, ಕೋಶಾಧಿಕಾರಿ ಆಸ್ಕರ್ ಆನಂದ್, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಡಾ|ರಾಜೇಶ್ ಬೆಜ್ಜಂಗಳ ಮತ್ತು ಸುದಾನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಶಾಂತ್ ಹಾರ್ವಿನ್, ಉಪಾಧ್ಯಕ್ಷ ಡಾ.ವಿಖ್ಯಾತ್ ನಾರಾಯಣ್, ಕಾರ್ಯದರ್ಶಿ ಸತ್ಯಾತ್ಮ ಭಟ್, ಕೋಶಾಧಿಕಾರಿ ಹರ್ಷಿತ್ ಎಂ.ಬಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here