ಡಾ.ನಝೀರ್ ಅಹಮ್ಮದ್‌ರವರ ಕ್ಲಿನಿಕ್‌ನಲ್ಲಿ ಥೈರಾಯಿಡ್ ಗ್ರಂಥಿಯ ಉಚಿತ ತಪಾಸಣಾ ಶಿಬಿರ

0

ಪುತ್ತೂರು: ವೈದ್ಯಕೀಯ ತಜ್ಞ ಡಾ|ನಝೀರ್ ಅಹಮ್ಮದ್ ಡಯಾಬೆಟ್ಸ್ ಸೆಂಟರ್, ರೋಟರಿ ಕ್ಲಬ್ ಪುತ್ತೂರು, ರೋಟರ‍್ಯಾಕ್ಟ್ ಕ್ಲಬ್ ಪುತ್ತೂರು ಮತ್ತು ಮೆರ್ಕ್ ಕಂಪೆನಿ ಸಹಯೋಗದಲ್ಲಿ ಥೈರಾಯಿಡ್ ಗ್ರಂಥಿಯ ಹಾಗೂ ಮಧುಮೇಹದ ಉಚಿತ ತಪಾಸಣಾ ಶಿಬಿರ ಫೆ.15 ರಂದು ಕಲ್ಲಾರೆ ಕೃಷ್ಣಾ ಆರ್ಕೆಡ್‌ನಲ್ಲಿರುವ ಡಾ|ನಝೀರ್ ಅಹಮ್ಮದ್‌ರವರ ಕ್ಲಿನಿಕ್‌ನಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಯಿತು.

ಅತಿಯಾದ ದಣಿವು, ಸುಸ್ತು, ನಿತ್ರಾಣ, ಮಲಬದ್ಧತೆ ಅಥವಾ ಅತಿಸಾರ, ಶೀತಕ್ಕೆ ಅಥವಾ ತಾಪಕ್ಕೆ ಅಸಹಿಷ್ಣುತೆ, ಕೂದಲು ಉದುರುವಿಕೆ, ನೆನಪಿನ ಶಕ್ತಿ ಕುಂದುವುದು, ಏಕಾಗ್ರತೆ ಕಷ್ಟವಾಗುವುದು, ತೂಕ ಹೆಚ್ಚಾಗುವುದು ಅಥವಾ ಕಡಿಮೆ ಆಗುವುದು, ಹೆಂಗಸರಿಗೆ ಅತಿಯಾದ ಮಾಸಿಕ ಸ್ರಾವ ಅಥವಾ ನಿಯಮ ತಪ್ಪಿದ ಮಾಸಿಕ ಸ್ರಾವ, ಮೃದುವಾದ ಕರ್ಕಶ ಸ್ವರ, ಗಂಟಲಿನಲ್ಲಿ ಊದುಕೊಳ್ಳುವಿಕೆ, ಅಧಿಕ ಎದೆ ಬಡಿತ ಅಥವಾ ರಕ್ತದೊತ್ತಡವುಳ್ಳವರು ಸುಮಾರು 50 ಮಂದಿ ಶಿಬಿರದಲ್ಲಿ ಪಾಲ್ಗೊಂಡಿದ್ದರು. ವೈದ್ಯಕೀಯ ತಜ್ಞ ಡಾ.ನಝೀರ್ ಅಹಮ್ಮದ್‌ರವರು ಶಿಬಿರದಲ್ಲಿ ಪಾಲ್ಗೊಂಡ ಫಲಾನುಭವಿಗಳಿಗೆ ಸೂಕ್ತ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ರೋಟರ‍್ಯಾಕ್ಟ್ ಕ್ಲಬ್ ಪುತ್ತೂರು ಅಧ್ಯಕ್ಷ ಗಣೇಶ್ ಕಲ್ಲರ್ಪೆ ಉಪಸ್ಥಿತರಿದ್ದರು. ಮೆಕ್ಲಾಯಿಡ್ ಕಂಪೆನಿಯ ವೀರೇಂದ್ರ, ಟೊರೆಂಟ್ ಕಂಪೆನಿಯ ಚೇತನ್, ಎರಿಶ್ ಕಂಪೆನಿಯ ಗಣೇಶ್, ಎಸ್‌ಆರ್‌ಎಲ್ ಲ್ಯಾಬ್‌ನ ಚಂದ್ರಕಲಾ ಹಾಗೂ ಡಾ.ನಝೀರ್ ಅಹಮದ್ ಕ್ಲಿನಿಕ್ ಸಿಬ್ಬಂದಿಗಳು ಸಹಕರಿಸಿದರು.

ಫಲಾನುಭವಿಗಳು…
ಥೈರಾಯಿಡ್ ಟೆಸ್ಟ್-45
HBA1C ಟೆಸ್ಟ್-25
ಮಧುಮೇಹ ಟೆಸ್ಟ್-50

LEAVE A REPLY

Please enter your comment!
Please enter your name here