ಮೊಟ್ಟೆತ್ತಡ್ಕ-ಮಣ್ಣಾಪು ಕೊರಗಜ್ಜ, ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಸಂಕ್ರಮಣ ಸೇವೆ

0

ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ-ಮಣ್ಣಾಪು ಶ್ರೀ ಕೊರಗಜ್ಜ ಮತ್ತು ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಫೆ.13 ರಂದು ಶ್ರೀ ಕ್ಷೇತ್ರದಲ್ಲಿ ಸಂಕ್ರಮಣದ ಪ್ರಯುಕ್ತ ಅಗೇಲು ಸೇವೆ ನಡೆಯಿತು.

ಶ್ರೀ ಕ್ಷೇತ್ರದ ಅರ್ಚಕರಾದ ಕುಂಡ ಮೊಗೇರ ಮಣ್ಣಾಪು, ಅಣ್ಣು ಮಣ್ಣಾಪು, ರವಿ ಮಣ್ಣಾಪು, ಮಧ್ಯಸ್ತರಾದ ಗಣೇಶ್ ಪೂಜಾರಿ ಕೆಮ್ಮಿಂಜೆರವರು ಸಂಕ್ರಮಣ ಸೇವೆಯನ್ನು ನಡೆಸುವಲ್ಲಿ ಸಹಕರಿಸಿದರು. ಶ್ರೀ ಕ್ಷೇತ್ರ ಅಧ್ಯಕ್ಷ ವಿಶ್ವನಾಥ ಮಣ್ಣಾಪು, ಉಪಾಧ್ಯಕ್ಷ ವಿಶ್ವನಾಥ ಪೂಜಾರಿ ಮೊಟ್ಟೆತ್ತಡ್ಕ, ಗೌರವ ಸಲಹೆಗಾರ ವಿಶ್ವನಾಥ ನಾಯ್ಕ ಅಮ್ಮುಂಜ, ಗುರುವ ಮಣ್ಣಾಪು, ಉಮೇಶ್ ಮಣ್ಣಾಪು, ಗಂಗಾಧರ ಮಣ್ಣಾಪು, ಸುಧೀರ್ ಅತ್ತಾಳ, ನಾರಾಯಣ ನಾಯ್ಕ ಸಿಂಹವನ, ಪಂಜಳ ಜೈ ಶ್ರೀರಾಂ ಫ್ರೆಂಡ್ಸ್ ಸದಸ್ಯರ ಸಹಿತ ನೂರಾರು ಸಂಖ್ಯೆಯಲ್ಲಿ ಭಕ್ತರು ಧಾರ್ಮಿಕ ವಿಧಿ ವಿಧಾನದಲ್ಲಿ ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡರು.

ಪ್ರತೀ ಸಂಕ್ರಮಣದಂದು ಶ್ರೀ ಕ್ಷೇತ್ರದಲ್ಲಿ ಅಗೇಲು ಸೇವೆ(ಅಗೇಲು ಬಾಬ್ತು ರೂ.1200) ನಡೆಯಲಿದ್ದು, ಆದಿತ್ಯವಾರ, ಮಂಗಳವಾರ, ಶುಕ್ರವಾರ ಭಕ್ತಾದಿಗಳಿಗೆ ಪ್ರಾರ್ಥನೆ ಸಲ್ಲಿಸಲು ಶ್ರೀ ಕ್ಷೇತ್ರದಲ್ಲಿ ಅವಕಾಶವಿದೆ. ಅಗೇಲು ಸೇವೆ ನೀಡುವ ಭಕ್ತಾದಿಗಳು ಒಂದು ದಿನ ಮುಂಚಿತವಾಗಿ ತಿಳಿಸತಕ್ಕದ್ದು. ಪ್ರಾರ್ಥನಾ ಸಮಯದಲ್ಲಿ ತಿಳಿಸಿದ ಸಿಯಾಳಾಭಿಷೇಕವನ್ನು ಸಂಕ್ರಮಣದಂದು ಬೆಳಿಗ್ಗೆ ಶ್ರೀ ಕ್ಷೇತ್ರದ ಸಮಿತಿಯವರಲ್ಲಿ ಒಪ್ಪಿಸತಕ್ಕದ್ದು. ವಸ್ತು ರೂಪದಲ್ಲಿ ಹರಕೆ ಒಪ್ಪಿಸುವವರು ಸಂಕ್ರಮಣದ ಬೆಳಿಗ್ಗೆ ತಿಳಿಸತಕ್ಕದ್ದು. ಹೆಚ್ಚಿನ ವಿವರಗಳಿಗೆ ಶ್ರೀ ಕ್ಷೇತ್ರ ಮಣ್ಣಾಪು ಆಡಳಿತ ಸಮಿತಿ (ಮೊ:7676806506, 7349237945, 7760580714)ಯನ್ನು ಸಂಪರ್ಕಿಸಬಹುದು ಎಂದು ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here