ಫೆ.20; ಕೆದಂಬಾಡಿ ಗ್ರಾ.ಪಂ.ನಲ್ಲಿ ಪುತ್ತೂರು ತಹಶೀಲ್ದಾರ್ ಗ್ರಾಮ ವಾಸ್ತವ್ಯ

0

ಪುತ್ತೂರು ; ಪುತ್ತೂರು ತಾಲೂಕು ತಹಶೀಲ್ದಾರ್ ರಮೇಶ್ ಬಾಬುರವರಿಂದ ಫೆ.20 ರಂದು ಕೆದಂಬಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಬೆಳಿಗ್ಗೆ 10ರಿಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ.

ಗ್ರಾಮವಾಸ್ತವ್ಯದಲ್ಲಿ ತಹಶೀಲ್ದಾರರು ಕಂದಾಯ ಇಲಾಖೆ ಮತ್ತು ಇನ್ನಿತರ ಇಲಾಖೆಗಳ ವಿವಿಧ ಸವಲತ್ತುಗಳನ್ನು ವಿತರಣೆ ಮಾಡಲಿದ್ದು, ಪುತ್ತೂರು ತಾಲೂಕಿನ ಎಲ್ಲಾ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಎಲ್ಲಾ ಇಲಾಖಾಧಿಕಾರಿಗಳು ಸಭೆಯಲ್ಲಿ ತಮ್ಮ ಇಲಾಖೆಯಿಂದ ಸಾರ್ವಜನಿಕರಿಗೆ ಒದಗಿಸಲಾಗುವ ಸವಸಲತ್ತುಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ಅಲ್ಲದೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಅರ್ಜಿ/ಮಾಹಿತಿಯನ್ನು ಪಡೆದು ಅರ್ಹ ಪ್ರಕರಣಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲು ಕ್ರಮ ಜರುಗಿಸಲಿದ್ದಾರೆ. ಕೆದಂಬಾಡಿ ಗ್ರಾಮದ ಸಾರ್ವಜನಿಕರು ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಹಶೀಲ್ದಾರ್ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here