ವಿಟ್ಲ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

0

ವಿಟ್ಲ: ಅಕ್ರಮ ಮರಳು ಸಾಗಾಟ ಪ್ರಕರಣದಲ್ಲಿ ಆರೋಪಿಯಾಗಿ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳ ಮೂಲದ ವ್ಯಕ್ತಿಯೊರ್ವರನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕೇರಳ ರಾಜ್ಯದ ಕೊಯಿಲಾಂಡಿ ಕುರುಂಗಾಡ್ ನಿವಾಸಿ ವೇಲುರವರ ಪುತ್ರ ಸುರೇಶ್ ಬಾಬು ಬಂಧಿತ ಆರೋಪಿ. 2010ರಲ್ಲಿ ನಡೆದ ಅಕ್ರಮ ಮರಳು ಸಾಗಾಟ ಪ್ರಕರಣವೊಂದರಲ್ಲಿ ಸುರೇಶ್ ಬಾಬುರವರು ಎರಡನೇ ಆರೋಪಿಯಾಗಿದ್ದರು.

ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿಯ ಪತ್ತೆಗೆ ವಾರಂಟ್ ಜಾರಿ ಮಾಡಿತ್ತು. ವಿಟ್ಲ ಠಾಣಾ ಇನ್ಸ್‌ಪೆಕ್ಟರ್ ಹೆಚ್.ಈ. ನಾಗರಾಜ್ ಮಾರ್ಗದರ್ಶನದಲ್ಲಿ ಎಎಸ್ ಐ ಜಯರಾಮ ರವರು ಕೊಯಿಲಾಂಡಿಯ ವಾರಾಂಗೀಲ್‌ನಿಂದ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

LEAVE A REPLY

Please enter your comment!
Please enter your name here