ಪಡ್ನೂರು: ಕೀಟನಾಶಕ ಸೇವಿಸಿ ಆತ್ಮಹತ್ಯೆ

0

ಪುತ್ತೂರು: ಕೀಟನಾಶಕ ಸೇವಿಸಿ ಕೃಷಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡ್ನೂರು ಗ್ರಾಮದ ಸೇಡಿಯಾಪು ಎಂಬಲ್ಲಿ ಫೆ.16 ರಂದು ನಡೆದಿದೆ.


ಸೇಡಿಯಾಪು ದಿ.ಈಶ್ವರ ಗೌಡ ಎಂಬವರ ಪುತ್ರ ಜತ್ತಪ್ಪ ಗೌಡ(68ವ) ರವರು ಆತ್ಮಹತ್ಯೆ ಮಾಡಿಕೊಂಡವರು. ತೀರಾ ಅನಾರೋಗ್ಯದಿಂದಿದ್ದ ಅವರು ಸಂಜೆ ಮನೆಯಲ್ಲಿ ಕೃಷಿಗೆ ಬಳಸುವ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದರು. ವಿಷಯ ತಿಳಿದ ಮನೆ ಮಂದಿ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ.

ಮೃತರು ಪತ್ನಿ ದೇವಕಿ, ಇಬ್ಬರು ಪುತ್ರಿಯರು, ಪುತ್ರನನ್ನು ಅಗಲಿದ್ದಾರೆ. ಪುತ್ರ ಮನೋಜ್ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here