![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ವಿಟ್ಲ: ಆಟೋ ಚಾಲಕರೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನದಲ್ಲಿ ನಡೆದಿದೆ. ಆಟೋ ಚಾಲಕ ಬೈರಿಕಟ್ಟೆ ನಿವಾಸಿ ದಿನೇಶ್ (32 ವ.)ರವರು ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.
ಅವಿವಾಹಿತರಾಗಿದ್ದ ದಿನೇಶ್ ರವರು ಫೆ.18ರಂದು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಈ ಬಗ್ಗೆ ವಿಟ್ಲ ಠಾಣಾ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ.