ಕಾವು ಶ್ರೀ ಮುತ್ತು ಮಾರಿಯಮ್ಮ ಜಾತ್ರಾ ಮಹೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ಕಾವು ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವವು ಮಾ.3 ರಿಂದ 5 ರ ತನಕ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಕೆರೆಮಾರು ಅಯ್ಯಪ್ಪ ಭಜನಾ ಮಂದಿರದ ಸ್ಥಾಪಕ ಅಧ್ಯಕ್ಷ ಸುಂದರ ಪೂಜಾರಿ ಕೆರೆಮಾರು ಮತ್ತು ಹಿರಿಯರಾದ ಶೇಷಪ್ಪ ಗೌಡ ಪರನೀರು, ನವೋದಯ ಒಕ್ಕೂಟ ಕಾವು ಇದರ ನಿಕಟಪೂರ್ವ ಅಧ್ಯಕ್ಷ ಚಿದಾನಂದ ಆಚಾರ್ಯ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡ್ನೂರು ಬಿ ಒಕ್ಕೂಟದ ಅಧ್ಯಕ್ಷೆ ಜಯಂತಿ ಗಂಗಾಧರ್ ಇವರ ಸಮ್ಮುಖದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕಾವು ಶ್ರೀ ಮುತ್ತು ಮಾರಿಯಮ್ಮ ದೇವಾಲಯದ ಆಡಳಿತ ಸಮಿತಿ ಅಧ್ಯಕ್ಷ ಬಾಲಕೃಷ್ಣ.ಪಿ, ಮಾಜಿ ಅಧ್ಯಕ್ಷ ಧರ್ಮಲಿಂಗಂ ರವರು ಉಪಸ್ಥಿತರಿದ್ದರು. ಮೋಹನ್ ರಾಜ್ ಸ್ವಾಗತಿಸಿ, ಮಹೇಂದ್ರನ್.ಕೆ ರವರು ವಂದಿಸಿ,ಬಾಲಕೃಷ್ಣ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here