ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

0

ಕಾಣಿಯೂರು: ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವವು ಫೆ 18ರಂದು ನಡೆಯಿತು. ದೇವಸ್ಥಾನದ ಅನುವಂಶಿಕ ಮೊಕ್ತೇಸರರು, ಅರ್ಚಕರು ಆಗಿರುವ ಜನೇಶ್ ಭಟ್ ಬರೆಪ್ಪಾಡಿಯವರ ನೇತೃತ್ವದಲ್ಲಿ ವಿವಿಧ ಪೂಜಾ ವಿಧಾನಗಳು ನಡೆಯಿತು. ಸಂಜೆ ಭಜನಾ ಕಾರ್ಯಕ್ರಮ, ಶ್ರೀ ದೇವರಿಗೆ 108 ಸೀಯಾಳ ಅಭಿಷೇಕ, ರುದ್ರಾಭಿಷೇಕ, ರಾತ್ರಿ ಮಹಾಪೂಜೆ ಪ್ರಸಾದ ವಿತರಣೆ ನಡೆಯಿತು. ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ಧಾರ್ಮಿಕ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಠಲ ಗೌಡ ಬರೆಪ್ಪಾಡಿ ಹಾಗೂ ಸಮತಿ ಸದಸ್ಯರು, ಭಕ್ತರು ಉಪಸ್ಥಿತರಿದ್ದರು. ಗಾಯಕ ಶಿವಾನಂದ ಶೆಣೈ ಪುತ್ತೂರು ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುರುಪ್ರಿಯ ನಾಯಕ್ ಮತ್ತು ಬಳಗದವರಿಂದ ಭಕ್ತಿ ಭಾವ ಗೀತಾ ಗಾನ ನಡೆಯಿತು.

LEAVE A REPLY

Please enter your comment!
Please enter your name here