ಐತ್ತೂರು: ಸ್ವಚ್ಛತಾ ಕಾರ್ಯ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶಿವರಾತ್ರಿ ಪ್ರಯುಕ್ತ ಪಾದಯಾತ್ರಿಗಳು ಹೋಗುವಾಗ ಎಸೆದ ಪ್ಲಾಸ್ಟಿಕ್ ತ್ಯಾಜಗಳನ್ನು ಮರ್ದಾಳದಿಂದ ನೆಲ್ಲಿಕಟ್ಟೆಯವರೆಗೆ ಐತ್ತೂರು ಗ್ರಾಮ ಪಂಚಾಯತ್ ಮತ್ತು ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸ್ವಚ್ಛತೆ ಮಾಡಲಾಯಿತು.

ಶೌರ್ಯತಂಡದ ಅಧ್ಯಕ್ಷರಾದ ಭವಾನಿ ಶಂಕರ್ ಹಾಗೂ ಸದಸ್ಯರು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 102ನೇ ನೆಕ್ಕಿಲಾಡಿ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಐತ್ತೂರು ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು,

ವಲಯದ ಮೇಲ್ವಿಚಾರಕ ಆನಂದ್, ಸೇವಾ ಪ್ರತಿನಿಧಿಗಳಾದ ಸುಶ್ಮಿತಾ, ರೇಖಾ, ವಿನೋದ್, ಕಾವೇರಿ ಸಂಜೀವಿನಿ ಒಕ್ಕೂಟದ ಸದಸ್ಯರು, ಎಂ.ಬಿ.ಕೆ, ಎಲ್.ಸಿ.ಆರ್.ಪಿ., ಗ್ರಾಮ ಪಂಚಾಯತ್ ಸದಸ್ಯೆ ಶ್ಯಾಮಲಾ, ಪಿಡಿಓ ಸುಜಾತ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here