ಉಪ್ಪಿನಂಗಡಿ: ಸಿಎ ಬ್ಯಾಂಕ್ ಸಿಬ್ಬಂದಿಗೆ ತರಬೇತಿ

0

ಉಪ್ಪಿನಂಗಡಿ: ಸಹಕಾರಿ ವ್ಯವಸಾಯಿಕ ಸಂಘ ನಿಯಮಿತ ಉಪ್ಪಿನಂಗಡಿ ಇದರ ಅಮೃತ ಮಹೋತ್ಸವ ವರ್ಷಾಚರಣೆಯಂಗವಾಗಿ ನಡೆಯುತ್ತಿರುವ ‘ಅಮೃತ ಸಂಗಮ’ ಕಾರ್ಯಕ್ರಮದಡಿ ಸಂಘದ ಸಿಬ್ಬಂದಿ ಹಾಗೂ ನಿರ್ದೇಶಕರಿಗೆ ತರಬೇತಿ ಕಾರ್ಯಕ್ರಮ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.

ಸಂಘದ ಮಾಜಿ ಅಧ್ಯಕ್ಷ ಚಂದ್ರಶೇಖರ ತಾಳ್ತಜೆ ಕಾರ್ಯಕ್ರಮ ಉದ್ಘಾಟಿಸಿದರು. ಪುತ್ತೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ತ್ರೀವೇಣಿ ರಾವ್ ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಸುನೀಲ್ ಕುಮಾರ್ ದಡ್ಡು, ನಿರ್ದೇಶಕರಾದ ಜಗದೀಶ ರಾವ್ ಮಣಿಕ್ಕಳ, ಯಶವಂತ ಜಿ., ಸುಜಾತ ರೈ ಎ., ಸಚಿನ್ ಮುದ್ಯ, ಯತೀಶ್ ಕುಮಾರ್ ಶೆಟ್ಟಿ, ಕುಂಞ ಹಾಗೂ ಉಪ್ಪಿನಂಗಡಿ ಸಿಎ ಬ್ಯಾಂಕ್‌ಗೊಳಪಟ್ಟ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕೆ.ವಿ. ಪ್ರಸಾದ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕ್ಲೇರಿ ವೇಗಸ್ ವಂದಿಸಿದರು. ಸಿಬ್ಬಂದಿ ಪ್ರವೀಣ್ ಆಳ್ವ ಅಭಿಪ್ರಾಯ ವ್ಯಕ್ತಪಡಿಸಿದರು. ಪುಷ್ಪರಾಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here