ಸಂಪ್ಯ ಉಚಿತ ವೈದ್ಯಕೀಯ ಶಿಬಿರದ ವಾರ್ಷಿಕೋತ್ಸವ `ಸಂಪ್ಯ ಆರೋಗ್ಯ ಮೇಳ’ದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು:ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ, ಆರೋಗ್ಯ ರಕ್ಷಾ ಸಮಿತಿಯ ವತಿಯಿಂದ ಸಂಪ್ಯ ನವಚೇತನ ಯುವಕ ಮಂಡಲ ಹಾಗೂ ಮುಕ್ರಂಪಾಡಿ ಶ್ರೀಸತ್ಯನಾರಾಯಣ ಪೂಜಾ ಸಮಿತಿ ಸಹಯೋಗದಲ್ಲಿ ದೇವಸ್ಥಾನದ ವಠಾರದಲ್ಲಿ ನಡೆಯುತ್ತಿರುವ ಉಚಿತ ವೈದ್ಯಕೀಯ ಶಿಬಿರದ ವಾರ್ಷಿಕೋತ್ಸವ `ಸಂಪ್ಯ ಆರೋಗ್ಯ ಮೇಳ’ವು ಮಾ.5ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯು ಫೆ.19ರಂದು ಬಿಡುಗಡೆಗೊಂಡಿತು.

ದರ್ಬೆ ಶುಭ ಬುಕ್ಸ್‌ನ ಮ್ಹಾಲಕ ಶ್ರೀಕೃಷ್ಣ ಭಟ್ ಆಮಂತ್ರಣ ಬಿಡುಗಡೆ ಮಾಡಿ ಶುಭಹಾರೈಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ ಮಾತನಾಡಿ, ವಾರ್ಷಿಕ ಶಿಬಿರದ ಬಗ್ಗೆ ಮಾಹಿತಿ ನೀಡಿದರು.

ಆರೋಗ್ಯ ರಕ್ಷಾ ಸಮಿತಿ ಗೌರವಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ಶಿಬಿರದ ಯಶಸ್ಸಿಗೆ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರು. ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಸ್ವಾಗತಿಸಿದರು. ಸಂಪ್ಯ ನವಚೇತನ ಯುವಕ ಮಂಡಲದ ಅಧ್ಯಕ್ಷ ವಿಜಯ ಬಿ.ಎಸ್. ವಂದಿಸಿದರು. ಉಮೇಶ್ ಎಸ್.ಕೆ ಕಾರ್ಯಕ್ರಮ ನಿರೂಪಿಸಿದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here