ಕುದ್ದುಪದವು: ಮನೆಯ ಬಾಗಿಲು ಮುರಿದು ನಗ-ನಗದು ಕಳವು

0

ವಿಟ್ಲ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದು ಕಳವುಗೈದಿರುವ ಘಟನೆ ಕುದ್ದುಪದವು ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಕುದ್ದುಪದವು ನಿವಾಸಿ ಶರೀಫ್ ಕೆ.ಪಿ.ರವರ ಮನೆಯಲ್ಲಿ ಕೃತ್ಯ ನಡೆದಿದೆ.‌

ಶರೀಫ್ ಕೆ.ಪಿ. ಹಾಗೂ ಅವರ ಪತ್ನಿ ಝಬೈದಾ ರವರು ವಾಸಿಸುತ್ತಿರುವ ಮನೆಯ ಆರ್‌ಸಿಸಿ ಮೇಲೆ ಹೋಗಲು ಇರುವ ಬಾಗಿಲನ್ನು ಕಬ್ಬಿಣದ ಸಲಾಕೆಯಿಂದ ಒಡೆದು ಒಳಗೆ ಪ್ರವೇಶಿಸಿದ ಕಳ್ಳರು ಮಲಗುವ ಕೋಣೆಯ ಕಪಾಟಿನ ಬಾಗಿಲು ಮುರಿದು ಅದರಲ್ಲಿದ್ದ 8 ಗ್ರಾಂ ತೂಕದ ಮಗುವಿನ ಕೈ ಚೈನ್-01, ತಲಾ 8 ಗ್ರಾಂ ತೂಕದ ಮಗುವಿನ ಕಾಲು ಚೈನ್-2, 12 ಗ್ರಾಂ ತೂಕದ ಕುತ್ತಿಗೆಯ ಸರ-1, 12 ಗ್ರಾಂ ತೂಕದ ಕೈ ಬಳೆ-1 ಹಾಗೂ ಗಾಡ್ರೇಜ್ ನಲ್ಲಿದ್ದ 15000 ರೂ. ನಗದು ಕಳ್ಳತನ ಮಾಡಿದ್ದಾರೆ. ಒಟ್ಟು ಚಿನ್ನಾಭರಣಗಳು 48 ಗ್ರಾಂ ಚಿನ್ನಾಭರಣ ಕಳವಾಗಿದ್ದು ಅದರ ಅಂದಾಜು ಮೌಲ್ಯ 96000 ರೂಪಾಯಿ ಆಗಿದೆ ಎಂದು ಝಬೈದಾರವರು ವಿಟ್ಲ ಠಾಣಾ ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here