ಗ್ರಾಮ ಪಂಚಾಯತ್ ಉಪಚುನಾವಣೆ-2 ದಿನ ಮದ್ಯದಂಗಡಿ ಬಂದ್

0

ಪುತ್ತೂರು: ದ.ಕ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಪಂಚಾಯತ್‌ಗಳಲ್ಲಿ ಫೆ.25ರಂದು ನಡೆಯಲಿರುವ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಫೆ.24 ಹಾಗೂ 25ರಂದು ಚುನಾವಣೆ ನಡೆಯಲಿರುವ ಪಂಚಾಯತ್ ವ್ಯಾಪ್ತಿಯಲ್ಲಿರುವ ಮದ್ಯ ಮಾರಾಟದ ಅಂಗಡಿಗಳನ್ನು ಮುಚ್ಚುವಂತೆ ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಆದೇಶಿಸಿದ್ದಾರೆ.

ಚುನಾವಣೆಯ ಹಿನ್ನಲೆಯಲ್ಲಿ ಮತದಾನದ ದಿನದಂದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದ್ದು ಫೆ.24 ಬೆಳಿಗ್ಗೆ 6 ಗಂಟೆಯಿಂದ ಫೆಬ್ರವರಿ 25ರ ಸಂಜೆ 6 ರವರೆಗೆ ಮದ್ಯ ಮಾರಾಟದ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ.

ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್‌ನ ಎಲ್ಲಾ ವಾರ್ಡ್‌ಗಳಿಗೆ ಚುನಾವಣೆ ಹಾಗೂ ಬಂಟ್ವಾಳ ತಾಲೂಕಿನ ಅನಂತಾಡಿ, ನೆಟ್ಲಮುಡ್ನೂರು, ಕಡಬ ತಾಲೂಕಿನ ಕಟ್ರುಪ್ಪಾಡಿ ಮತ್ತು ಪುತ್ತೂರು ತಾಲೂಕಿನ ಆರ್ಯಾಪು ಗ್ರಾ. ಪಂನಲ್ಲಿ ತೆರವಾದ ತಲಾ ಒಂದೊಂದು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಚುನಾವಣೆ ನಡೆಯಲಿರುವ ಪಂಚಾಯತ್ ವ್ಯಾಪ್ತಿಯಲ್ಲಿರುವ ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here