ಅಥ್ಲೆಟಿಕ್ಸ್ ನಲ್ಲಿ ಚರಿಷ್ಮಾ ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಕಡಬ: ಫೆ.20 ರಂದು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ 17ರ ವಯೋಮಾನದ ಬಾಲಕಿಯರ ವಿಭಾಗದ1500 ಮೀ ಓಟದ ಸ್ಪರ್ಧೆಯಲ್ಲಿ ಕಡಬ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಚರಿಷ್ಮಾ ದ್ವಿತೀಯ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.

ಈಕೆಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಲೋಕೇಶ್ ತಂಟೆಪ್ಪಾಡಿ ತರಬೇತಿಯನ್ನು ನೀಡಿರುತ್ತಾರೆ. ಈಕೆ ಮರ್ಧಾಳ ಗ್ರಾಮದ ಬಸವಪಾಲು ಸುಬ್ರಾಯ ಗೌಡ ಮತ್ತು ಸುಮತಿ ದಂಪತಿಗಳ ಪುತ್ರಿ.

LEAVE A REPLY

Please enter your comment!
Please enter your name here