ಕಳ್ಳತನ ಪ್ರಕರಣ – ವಾರಂಟ್ ಆರೋಪಿ ಬಂಧನ

0

ಪುತ್ತೂರು: 6 ವರ್ಷಗಳ ಹಿಂದೆ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ 5 ವರ್ಷಗಳಿಂದ ನ್ಯಾಯಾಲಯದಲ್ಲಿ ವಿಚಸರಣೆಗೆ ಹಾಜರಾಗದೆ ತಲೆಮರೆಸಿಕೊಂಡ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಪುತ್ತೂರು ಚಿಕ್ಕಮುಡ್ನೂರು ಗ್ರಾಮದ ತಾರಿಗುಡ್ಡೆ ನಿವಾಸಿಯಾಗಿದ್ದು ಪ್ರಸ್ತುತ ಕೇರಳ ಮಲಪ್ಪುರಂ ಪೋಕೊ್ಕೊಟ್ಟುಪಾಡ್ ಎಂಬಲ್ಲಿ ವಾಸ್ತವ್ಯ ಇರುವ ಅಶ್ರಫ್ ಯಾನೆ ಮೊಹಮ್ಮದ್ ಅಶ್ರಫ್ ಬಂಧಿತ ಆರೋಪಿ. ಅಶ್ರಫ್ ಯಾನೆ ಮೊಹಮ್ಮದ್ ಅಶ್ರಫ್ ಅವರು 2017 ರಲ್ಲಿ ಮನೆಯೊಂದರಿಂದ ಕಳವು ಪ್ರಕರಣಕ್ಕೆ ಬಂಧಿಸಿ ಬಂಧಿತರಾಗಿದ್ದರು.

ಬಳಿಕ ಜಾಮೀನು ಪಡೆದ ಅವರು ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ನ್ಯಾಯಾಲಯ ಅವರ ವಿರುದ್ಧ ವಾರಂಟ್ ಜಾರಿ ಮಾಡಿತ್ತು. ಪುತ್ತೂರು ಪೊಲೀಸರು ಅಶ್ರಫ್ ಯಾನೆ ಮೊಹಮ್ಮದ್ ಅಶ್ರಫ್ ಅವರು ಹಾಲಿ ಸ್ಥಳ ಕೇರಳದಿಂದ ಪುತ್ತೂರಿಗೆ ಬರುತ್ತಿರುವ ಮಾಹಿತಿ ಪಡೆದು ಬೊಳುವಾರಿನಲ್ಲಿ ಬಂಧಿಸಿದರು. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

LEAVE A REPLY

Please enter your comment!
Please enter your name here