ದ.ಕ. ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ ಆಯ್ಕೆ

0

ಪುತ್ತೂರು:ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ನಾಲ್ಕನೇ ಅಧ್ಯಕ್ಷರಾಗಿ ಉದ್ಯಮಿ ಪದ್ಮನಾಭ ಶೆಟ್ಟಿಯವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಬಂಟ್ವಾಳ ಜಿಲ್ಲಾ ಯೋಜನಾ ಕಛೇರಿಯಲ್ಲಿ ನಡೆದ ಉಡುಪಿ ಪ್ರಾದೇಶಿಕ ವ್ಯಾಪ್ತಿಯ ದಕ್ಷಿಣ ಕನ್ನಡ 1 ಮತ್ತು ದ.ಕ.2 ಜಿಲ್ಲಾ ವ್ಯಾಪ್ತಿಯ ಜನಜಾಗೃತಿ ವೇದಿಕೆಯ ಸಭೆಯಲ್ಲಿ ನೂತನ ಜಿಲ್ಲಾಧ್ಯಕ್ಷರ ಆಯ್ಕೆ ನಡೆಯಿತು.


ಅಧ್ಯಕ್ಷರ ಪರಿಚಯ:


ಬೊಳುವಾರುನಲ್ಲಿರುವ ಪದ್ಮ ಸೋಲಾರ್ ಸಿಸ್ಟಮ್ಸ್ ಮಾಲಕರಾಗಿರುವ ಪದ್ಮನಾಭ ಶೆಟ್ಟಿಯವರು ಈ ಹಿಂದೆ ಜನಜಾಗೃತಿ ವೇದಿಕೆಯ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳಲ್ಲಿ ಕಳೆದ 30 ವರ್ಷಗಳಿಂದ ಸಕ್ರಿಯರಾಗಿ ತೊಡಗಿಸಿಕೊಂಡಿರುವ ಪದ್ಮನಾಭ ಶೆಟ್ಟಿಯವರು ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

ಪುತ್ತೂರು ಪರ್ಲಡ್ಕದ ಡಾ|ಶಿವರಾಮ ಕಾರಂತ ಬಾಲವನ ಸಮಿತಿ ಅಧ್ಯಕ್ಷರಾಗಿ, 2009ರ ವಿಶ್ವ ತುಳು ಸಮ್ಮೇಳನದ ಕಾರ್ಯದರ್ಶಿಯಾಗಿ, ಜಿಲ್ಲಾ ಕ್ರೀಡಾ ಸಂಚಾಲಕರಾಗಿ ಕೆಲಸ ನಿರ್ವಹಿಸಿರುತ್ತಾರೆ.ವಿವಿಧ ಸಂಘ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದ ಇವರಿಗೆ ಅತ್ಯುತ್ತಮ ರೋಟರ್‍ಯಾಕ್ಟ್ ಸಭಾಪತಿ ಪ್ರಶಸ್ತಿ ದೊರಕಿರುತ್ತದೆ.ಇವರು ರೆಡ್ ಕ್ರಾಸ್ ಸಂಸ್ಥೆಯ ಪುತ್ತೂರು ತಾಲೂಕು ಉಪಸಭಾಪತಿಗಳೂ ಆಗಿರುತ್ತಾರೆ.ಉಪಾಧ್ಯಕ್ಷರಾಗಿ ಬೆಳ್ತಂಗಡಿ ತಾಲೂಕು ವೇದಿಕೆ ಅಧ್ಯಕ್ಷರಾದ ಶಾರದಾ ಆರ್. ರೈ ಆಯ್ಕೆಯಾಗಿರುತ್ತಾರೆ.ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಗೆ ಪುತ್ತೂರು, ಕಡಬ, ವಿಟ್ಲ, ಬಂಟ್ವಾಳ, ಸುಳ್ಯ, ಬೆಳ್ತಂಗಡಿ, ಗುರುವಾಯನಕೆರೆ, ಮಂಗಳೂರು, ಬಜ್ಪೆ ಹಾಗೂ ಕಾಸರಗೋಡು ಘಟಕಗಳು ಕಾರ್ಯನಿರ್ವಹಿಸುತ್ತವೆ.ಬಂಟ್ವಾಳ ಜಿಲ್ಲಾ ಯೋಜನಾ ಕಚೇರಿಯಲ್ಲಿ ನಡೆದ ಸಭೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ವಸಂತ ಸಾಲ್ಯಾನ್‌ರವರು ದೀಪ ಬೆಳಗಿಸಿ ಉದ್ಘಾಟಿಸಿದರು.ಸಭೆಯಲ್ಲಿ ಪ್ರಸ್ತುತ ವರ್ಷದಲ್ಲಿ ನಡೆಸಲಾದ ಜನಜಾಗೃತಿ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ಚರ್ಚೆ ನಡೆಯಿತು. ಮತ್ತು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮಗಳ ವರದಿಗಳನ್ನು ಮಂಡಿಸಲಾಯಿತು.ದ.ಕ.-1 ಮತ್ತು ದ.ಕ.-2 ಜಿಲ್ಲೆಗಳ ಅಧ್ಯಕ್ಷರು,ಮಾಜಿ ಅಧ್ಯಕ್ಷರು, ಯೋಜನಾಧಿಕಾರಿಗಳು ಭಾಗವಹಿಸಿ ಸಲಹೆ ಸೂಚನೆ ನೀಡಿದರು.


ವೇದಿಕೆಯಲ್ಲಿ ದ.ಕ. ಜಿಲ್ಲಾಧ್ಯಕ್ಷರಾದ ಎನ್.ಎ.ರಾಮಚಂದ್ರ, ನಿಕಟಪೂರ್ವ ಅಧ್ಯಕ್ಷರಾದ ಮಹಮ್ಮದ್ ಇಸ್ಮಾಯಿಲ್, ಸಾಜ ರಾಧಾಕೃಷ್ಣ ಆಳ್ವ, ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯ್ಸ್, ಜಿಲ್ಲಾ ನಿರ್ದೇಶಕರಾದ ಸತೀಶ್ ಶೆಟ್ಟಿ ಮತ್ತು ಪ್ರವೀಣ್‌ಕುಮಾರ್ ಉಪಸ್ಥಿತರಿದ್ದರು.


ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯು ಕಳೆದ 31 ವರ್ಷಗಳಿಂದ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ನಿರ್ವಹಣೆಯಲ್ಲಿ ಸಾರ್ಥಕ ಸೇವೆಯನ್ನು ಮಾಡುತ್ತಾ ಬಂದಿದೆ.ಬೆಳ್ತಂಗಡಿ ತಾಲೂಕಿನಲ್ಲಿ ಆರಂಭಗೊಂಡ ಈ ಯೋಜನೆಯು ಇದೀಗ ರಾಜ್ಯಾದ್ಯಂತ ವಿಸ್ತರಿಸಿದೆ.ವೇದಿಕೆಯ ಈ ಕಾರ್ಯಚಟುವಟಿಕೆಯಲ್ಲಿ ರಾಜ್ಯಾದ್ಯಂತ 1061 ನಾಮನಿರ್ದೇಶಿತ ಸದಸ್ಯರು ಮತ್ತು ಪದಾಧಿಕಾರಿಗಳು, 10500ಕ್ಕೂ ಮಿಕ್ಕಿದ ಸ್ವಯಂ ಸೇವಕರು ಯಾವುದೇ ಫಲಾಪೇಕ್ಷೇಯಿಲ್ಲದೆ ಅವಿರತ ಶ್ರಮಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here