ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ

0

ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನಲ್ಲಿ 2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ದೀಪ ಪ್ರದಾನ ಕಾರ್ಯಕ್ರಮ ಫೆ.21ರಂದು ನಡೆಯಿತು.

ಮುಖ್ಯ ಅತಿಥಿ ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್‌ ಕಾಲೇಜಿನ ಪ್ಲೇಸ್‌ಮೆಂಟ್‌ ವಿಭಾಗದ ಮುಖ್ಯಸ್ಥೆ ವಂದನಾ ಶಂಕರ್‌ ಮಾತನಾಡಿ ವಿದ್ಯಾರ್ಥಿಗಳು ಮುಂದಿನ ಜೀವನದಲ್ಲಿ ರಾಷ್ಟ್ರ ಕಟ್ಟುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸುವುದರೊಂದಿಗೆ ಸಾಮಾಜಿಕ ಬದ್ಧತೆಯ ಜೀವನವನ್ನು ನಡೆಸಬೇಕು ಎಂದರು.

ಇಂದ್ರಪ್ರಸ್ಥ ಸಂಸ್ಥೆಗಳ ಸಂಚಾಲಕ ಯು. ಜಿ. ರಾಧ ಎಲ್ಲಾ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಜೀವನಕ್ಕೆ ಶುಭ ಹಾರೈಸಿದರು. ಸಮಾರಂಭದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅತಿಥಿಗಳು ದೀಪವನ್ನು ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರುಗಳಾದ ರಾಜೇಶ್ ಪೈ, ಸುಧಾಕರ್ ಶೆಟ್ಟಿ, ಏಕವಿದ್ಯಾದರ ಜೈನ್, ಸುರೇಶ್, ಇಂದ್ರಪ್ರಸ್ಥ ವಿದ್ಯಾಲಯದ ಮುಖ್ಯಶಿಕ್ಷಕಿ ವೀಣಾ ಪ್ರಸಾದ್ ಹಾಗೂ ಪ್ರಾಂಶುಪಾಲ ಹೆಚ್ ಕೆ ಪ್ರಕಾಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಸಾಯನ ಶಾಸ್ತ್ರ ಉಪನ್ಯಾಸಕಿ ಜಯಂತಿ ಎ ಕೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here